Friday, 27th September 2024

Murder case: ಗಂಡನಿಗೆ ನಿದ್ರೆ ಮಾತ್ರೆ ಹಾಕಿ ಪರಸಂಗ, ಪ್ರಿಯತಮನ ಜೊತೆ ಸೇರಿ ಕೊಲೆ

davanagere murder case

ದಾವಣಗೆರೆ: ತನ್ನ ಅಕ್ರಮ ಸಂಬಂಧಕ್ಕೆ (relationship) ಅಡ್ಡಿ ಆಗಬಹುದು ಎಂದು ಭಾವಿಸಿ ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ (Murder Case) ಮಾಡಿದ್ದಾಳೆ. ಗಂಡನ ಅರಿವಿಗೆ ಬಾರದಂತೆ ಈಕೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಆತನನ್ನು ಮಲಗಿಸಿ ಪ್ರಿಯಕರನ ಜೊತೆ ಸೇರುತ್ತಿದ್ದಳು ಎಂದು ಗೊತ್ತಾಗಿದೆ.

ಈ ಘಟನೆ ದಾವಣಗೆರೆ (Davanagere crime news) ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 2023ರ ಫೆಬ್ರವರಿಯಲ್ಲಿ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಾಮಧೇಯ ಮೃತದೇಹ ನೀರಿನಲ್ಲಿ ಪತ್ತೆಯಾಗಿತ್ತು. ಈ ದೇಹ ಕಾಣೆಯಾಗಿದ್ದ ಇಲಿಯಾಸ್ ಅಹಮ್ಮದ್ ಎಂಬವನದು ಎಂದು ಅನುಮಾನಗೊಂಡಿದ್ದ ಪೊಲೀಸರು, ಕೂಡಲೇ‌ ಮೃತನ ಮಕ್ಕಳ ಹಾಗೂ ಮೃತದೇಹದ ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದರು. ನಂತರ ಪರೀಕ್ಷೆಯಲ್ಲಿ ಮೃತ ಇಲಿಯಾಸ್ ಅಹಮ್ಮದ್ ಎಂದು ದೃಢಪಟ್ಟಿತ್ತು.

ಇಲಿಯಾಸ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಆತನ ಪೋಷಕರು, ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೋಲಿಸರು, ಇಲಿಯಾಸ್ ಪತ್ನಿ ಭಿಭಿ ಆಯೇಷಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಇದೊಂದು ಪೂರ್ವನಿಯೋಜಿತ ಕೊಲೆ ಎನ್ನುವುದು ಬಯಲಿಗೆ ಬಂದಿದೆ. ಆಕೆಯ ಪ್ರಿಯಕರ ಮಂಜುನಾಥ್​ ಹಾಗೂ ಭಿಭಿ ಆಯೇಷಾ ಸೇರಿ ಇಲಿಯಾಸ್​ನನ್ನು ಕೊಲೆ ಮಾಡಿರುವುದು ಖಚಿತವಾಗಿದೆ.

ಪತಿ ಇಲಿಯಾಸ್​ಗೆ ನಿದ್ದೆ ಮಾತ್ರೆ ಹಾಕಿ ದೈಹಿಕ ಸಂಪರ್ಕ ನಡೆಸುತ್ತಿದ್ದ ಆಯೇಷಾ ಮತ್ತು ಮಂಜುನಾಥ್, ಇಲಿಯಾಸ್​ನನ್ನು ಕೊಂದರೆ ಅಕ್ರಮ ಸಂಬಂಧಕ್ಕೆ ಅಡ್ಡಿ ಇರುವುದಿಲ್ಲ ಎಂದು ಸಂಚು ಹೂಡಿದ್ದಾರೆ. ಉಪಾಯದಿಂದ‌ ಇಲಿಯಾಸ್​ನನ್ನು ಸಾಗರಪೇಟೆ ಬಳಿ ಡಾಬಾಗೆ ಪಾರ್ಟಿಗೆ ಕರೆದುಕೊಂಡು ಹೋಗಿದ್ದ ಮಂಜುನಾಥ್, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಇಲಿಯಾಸ್​ಗೆ ಕುಡಿಸಿದ್ದ. ಬಳಿಕ ಬಲವಂತವಾಗಿ ಚಾನಲ್‌ನಲ್ಲಿ ಈಜಾಡಲು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಇದೀಗ ಕೊಲೆ ಆರೋಪಿಗಳಾದ ಇಲಿಯಾಸ್ ಪತ್ನಿ ಆಯೇಷಾ, ಪ್ರಿಯಕರ ಮಂಜುನಾಥ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Bengaluru Woman Murder: ನನ್ನನ್ನೂ ಸೇರಿ ನಾಲ್ವರಿಗೆ ಮೋಸ ಮಾಡಿದಳು ಮಹಾಲಕ್ಷ್ಮಿ: ಪ್ರೇಮವಂಚಿತ ಕೊಲೆಗಾರನ ಪ್ರಲಾಪ