ರಾಮನಗರ : ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಬಾಂಬ್ ಸಿಡಿಸಿದ್ದಾರೆ.
ಸ್ಥಳೀಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿ, 2018 ರ ಚುನಾವಣೆಯಲ್ಲಿ ನಮ್ಮ ಜಿಲ್ಲೆಯ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿ ದ್ದಾಯ್ತು, ಕುಮಾರಸ್ವಾಮಿಯವರ ಸರದಿ ಮುಗಿದಾಯ್ತು, ಇನ್ನೇನ್ನಿದ್ದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸರದಿ ಎಂದು ಹೇಳಿದ್ದಾರೆ.
ನಮ್ಮ ಜಿಲ್ಲೆಯ ನಾಯಕನಿಗೆ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಎಲ್ಲರೂ ಕೈ ಜೋಡಿಸ ಬೇಕು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.