Sunday, 8th September 2024

5 ರೂ. ಡಾಕ್ಟರ್ ಸಿ.ಎಸ್.ಶಂಕರೇಗೌಡ ಡಿಸ್ಚಾರ್ಜ್

ಮಂಡ್ಯ: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ ಸಿ.ಎಸ್.ಶಂಕರೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮೇ.23ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

error: Content is protected !!