ಶಿವಮೊಗ್ಗ: ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಆರ್. ನೇಮಕಗೊಂಡಿದ್ದಾರೆ.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬುಧವಾರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಸೆಲ್ವಮಣಿ ಆರ್. ಅವರನ್ನು ತಕ್ಷಣ ದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಕೆ. ಬಿ. ಶಿವಕುಮಾರ್ 2019ರ ಆಗಸ್ಟ್ನಿಂದ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಶಿವಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿರುವ ಸರ್ಕಾರ ಸ್ಥಳವನ್ನು ನಿಯೋ ಜನೆ ಮಾಡಿಲ್ಲ. ಡಾ. ಸೆಲ್ವಮಣಿ ಆರ್. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಡಾ. ಸೆಲ್ವಮಣಿ ಆರ್. 2021ರ ಫೆಬ್ರವರಿಯಲ್ಲಿ ಕೋಲಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2013ರ ಕರ್ನಾಟಕ ಕೆಡರ್ ಅಧಿಕಾರಿ ಯಾಗಿರುವ ಡಾ. ಸೆಲ್ವಮಣಿ ಆರ್. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.