Saturday, 27th July 2024

ಫೈನಾನ್ಸ್ ಸಿಬ್ಬಂದಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗ ಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ.

ದೇವೀರಮ್ಮ (64) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಡೂರಿನ ಗ್ರಾಮೀಣ ಕೂಟದಿಂದ ಫೈನಾನ್ಸ್​ 78 ಸಾವಿರ ರೂ. ಸಾಲ ಪಡೆದಿದ್ದರು. ಅರ್ಥಿಕ ಸಂಕಷ್ಟದಿಂದ ಒಂದು ತಿಂಗಳಿನಿಂದ ಸಾಲದ ಕಂತನ್ನು ಮರುಪಾವತಿ ಮಾಡಿರಲಿಲ್ಲ.

ಒಂದು ತಿಂಗಳಿನಿಂದ ಪ್ರತಿ ವಾರ ಫೈನಾನ್ಸ್​ಗೆ ಸಾಲ ಮರು ಪಾವತಿ ಮಾಡದ ಹಿನ್ನೆಲೆ ದೇವೀರಮ್ಮ ಅವರ ಮನೆ ಬಳಿ ಬಂದು ಕಿರುಕುಳ ನೀಡಿದ ಆರೋಪ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ.

ಉಳಿದ ಬಾಕಿ ಮೊತ್ತ ಕಟ್ಟುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ ಕಚೇರಿಗೆ ಮಹಿಳೆ ಕರೆಸಿ ಇಡೀ ದಿನ ಫೈನಾನ್ಸ್ ಕಚೇರಿಯಲ್ಲಿ ಹಣ ಕಟ್ಟುವಂತೆ ಒತ್ತಡ ಹೇರಿದ್ದಾರೆ. ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಗ್ರಾಮಿಣ ಕೂಟ ಫೈನಾನ್ಸ್ ಸಿಬ್ಬಂದಿ ಶಂಕರ್ ನಾಯಕ್, ಉಷಾ, ರುಬೀನಾ‌ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!