ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕ್ರಷರ್ ಕೆಲಸಕ್ಕೆ ಬಾಲಕಿ ನೇಮಿಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಬಾಲಕಿಯ ಸಂಬಂಧಿ ಮಹಿಳೆ ಗೀತಾ (ಚಿಕ್ಕಮ್ಮ ಎಂದು ಹೇಳಿಕೊಂಡಿರುವ), ಸ್ಮಾಲ್ ಅಭಿ, ಗಿರೀಶ್, ವಿಕಾಸ್, ಮಣಿಕಂಠ, ಅಶ್ವತ್ಥ್ ಗೌಡ, ರಾಜೇಶ್ ಈ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ನಿರಂತರವಾಗಿ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ.