ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ ಮೃತರಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ದೊಡ್ಡಆಲಹಳ್ಳಿಯಲ್ಲಿ ಸಂಜೆ ನಿಂಗಮ್ಮ ಅಂತ್ಯಕ್ರಿಯೆ ನೆರವೇರಲಿದೆ. ಅಜ್ಜಿ ಮೃತರಾದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.