Saturday, 27th July 2024

’5 ರೂ. ಡಾಕ್ಟರ್’ ಡಾ.ಶಂಕರೇಗೌಡರಿಗೆ ಲಘು ಹೃದಯಘಾತ

ಮಂಡ್ಯ : ಜಿಲ್ಲೆಯ 5 ರೂ. ಡಾಕ್ಟರ್ ಖ್ಯಾತಿಯ ಡಾ.ಶಂಕರೇಗೌಡ ಅವರಿಗೆ ಲಘು ಹೃದಯಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ರಾತ್ರಿ ಹೃದಯಾಘಾತವಾಗಿದ್ದು, ಕೂಡಲೇ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿದೆ. ಆದರೆ ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಡ ಜನರಿಗೆ ಅನುಕೂಲವಾಗುವಂತೆ ಸೇವೆ ಸಲ್ಲಿಸುತ್ತಿರುವ ಶಂಕರೇಗೌಡರು 5 ರೂಪಾಯಿ ಡಾಕ್ಟರ್ ಎಂದೇ ಚಿರಪರಿಚಿತರು. ಮಂಡ್ಯದ ತಮ್ಮ ಕ್ಲಿನಿಕ್‍ನಲ್ಲಿ ಪ್ರತಿಯೊಬ್ಬರಿಗೆ 5 ರೂಪಾಯಿ ಪಡೆಯುತ್ತಾರೆ.

error: Content is protected !!