Saturday, 27th July 2024

ಯುವ ಕಾಂಗ್ರೆಸ್​​ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್​​.ಎಸ್​.ಮಂಜುನಾಥ್ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್​ನಲ್ಲಿ ಮೇಜರ್​ ಸರ್ಜರಿ ನಡೆದಿದೆ.

ರಾಜ್ಯ ಯುವ ಕಾಂಗ್ರೆಸ್​​ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್​​.ಎಸ್​.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್​ ಎಸ್​ ಮಂಜುನಾಥ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಒಕ್ಕಲಿಗ ಸಮುದಾದಯವರಾದ ಹೆಚ್​​.ಎಸ್​.ಮಂಜುನಾಥ್ ​​ಅವರು ಈ ಹಿಂದೆ ಮಹಾಲಕ್ಷ್ಮೀ ಲೇಔಟ್​​ನಿಂದ ವಿಧಾನಸಭೆ ಸ್ಪರ್ಧಿಸಿದ್ದರು. ಈಗ ಹೆಚ್​​.ಎಸ್​.ಮಂಜುನಾಥ್ ಅವರಿಗೆ ಹೈಕಮಾಂಡ್​ ಕಾರ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಮೊಹಮ್ಮದ್​ ನಲಪಾಡ್ ಯುವ ಕಾಂಗ್ರೆಸ್​​ನ ಹಾಲಿ ಅಧ್ಯಕ್ಷರಾಗಿದ್ದಾರೆ.

ಒಕ್ಕಲಿಗರಾಗಿರುವ ಹೆಚ್​ಎಸ್​ ಮಂಜುನಾಥವರನ್ನು ಯುವ ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಮತಗಳನ್ನು ಸೆಳೆಯಲು ಪ್ಲ್ಯಾನ್​​ ಮಾಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್​ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬುನಾದಿ ಹಾಕಲಾಗಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!