ತುಮಕೂರು: ಭಾರೀ ಕುತೂಹಲ ಮೂಡಿಸಿರುವ ಶಿರಾ ಉಪಚುನಾವಣೆಗೆ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಪಕ್ಷ ಜಯ್ ಚಂದ್ರರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿರಲಿಲ್ಲ. ದಳಪತಿಗಳು ಅಮ್ಮಾಜಮ್ಮಗೆ ಟಿಕೆಟ್ ನೀಡುವ ಸುಳಿವು ಅರಿವು ಕಳೆದ ಮೂರು ದಿನಗಳ ಹಿಂದೆ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಪಕ್ಷಾಂತರ ಪರ್ವ ಇನ್ನೂ ಸಹ ಮುಂದುವರೆದಿದೆ.