ವಿಜಯಪುರ: ಲಾರಿ ಮತ್ತು ಟವೇರಾ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಕ್ರೀಡಾಪಟುಗಳ ಸ್ಥಿತಿ ಗಂಭೀರವಾಗಿದೆ. ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ.
ಸೊಹೇಲ್(22) ಮತ್ತು ಮಹಾದೇವ(20) ಮೃತರು. ಕಬಡ್ಡಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯತ್ತ ಹತ್ತು ಜನರ ಕಬಡ್ಡಿ ತಂಡ ಟವೇರಾದಲ್ಲಿ ಪ್ರಯಾಣಿಸುತ್ತಿತ್ತು.
ಟವೇರಾದಲ್ಲಿ ಮುಂಭಾಗ ಕುಳಿತ್ತಿದ್ದ ಮಹಾರಾಷ್ಟ್ರದ ಮೂಲದ ಕ್ರೀಡಾಪಟುಗಳು ಮೃತಪಟ್ಟಿದ್ದು, ಉಳಿದ 8 ಮಂದಿ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಟವೇರಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ