Monday, 20th May 2024

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮಾವ ಸೊಸೆ ಸಾವು

ಲಬುರ್ಗಿ : ತಾಲೂಕಿನ ಬೇಲೂರು ಗ್ರಾಮದಿಂದ ಬಸವಕಲ್ಯಾಣಕ್ಕೆ ಮದುವೆಗೆ ಎಂದು ಹೋಗುವಾಗ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮಾವ ಸೊಸೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಗುರುನಾಥ್(46) ಹಾಗೂ ಸಂಗೀತಾ (32) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಲಕ್ಷ್ಮಣ್​ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೇಡಂ ತಾಲೂಕಿನ ಊಡಗಿಯಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ಸುಮಾರು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಉದ್ರಿಕ್ತಗೊಂಡ ಅನ್ಯ ಕೋಮಿನ ಜನರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ರಾತ್ರಿ ಹತ್ತು ಗಂಟೆಗೆ ಪೊಲೀಸ್​ ಠಾಣೆಯ ಮುಖ್ಯ ರಸ್ತೆ ತಡೆದು ಮತ್ತೊಂದು ಸಮಾಜದ ಮುಖಂಡರು ಹಾಗೂ ಯುವಕರು ಪ್ರತಿಭಟನೆ ಆರಂಭಿಸಿದರು.

ಮಲ್ಲಿಕಾರ್ಜುನ್ ಮತ್ತು ಅವರ ಸಹಚರರು ಹತ್ತರಿಂದ 15 ಜನ ಯುವಕರು ಸೇರಿ ಜವರ್ ಪಟೇಲ್(48), ಸೈಯದ್ ಹಮೀದ್(54), ಸೈಯದ್ ಮೋಸಿನ್ (25), ರಸ್ತಾಗಿರ(22), ಚಾಂದ್ ಪಾಶಾ (25), ಸದ್ದಾಂ ಸೇರಿದಂತೆ ಒಟ್ಟು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿ ಯಾಗಿದ್ದು, ಅವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನಿನ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನೆಕಾರರು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!