Saturday, 27th July 2024

ನವೆಂಬರ್‌ 11-13ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ನಗರದಲ್ಲಿ ನವೆಂಬರ್‌ 11, 12 ಮತ್ತು 13ರಂದು ’86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿ ದ್ದಾರೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.

ನಗರದಲ್ಲಿ ಶನಿವಾರ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪರ್ಕ ಕಚೇರಿಯ ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನವೆಂಬರ್‌ 11 ರಂದು ಕನಕದಾಸ ಜಯಂತಿ ಇದ್ದು, ಅಂದು ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರಲಿದೆ. ನ.12ರಂದು ಎರಡನೇ ಶನಿವಾರ ಮತ್ತು ನ.13ರಂದು ಭಾನುವಾರವಿದ್ದು, ಮೂರು ದಿನ ಸರ್ಕಾರಿ ರಜೆಗಳಿರುತ್ತವೆ. ಹೀಗಾಗಿ ಸರ್ಕಾರಿ ನೌಕರರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ ಎಂದರು.

107 ವರ್ಷಗಳ ನಂತರ ಕಸಾಪ ಅಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾ ಗಿದ್ದು, ಕನ್ನಡ ಕೆಲಸ ಮಾಡಲು ‘ಭೀಮಬಲ’ ಸಿಕ್ಕಂತಾಗಿದೆ. ಜರ್ಮನಿಯಲ್ಲಿ ವಾಸವಾಗಿ ರುವ ಕನ್ನಡದ ಮೊದಲ ನಿಘಂಟು ತಜ್ಞ ಫರ್ಡಿನೆಂಡ್‌ ಕಿಟೆಲ್‌ ಅವರ ಮೊಮ್ಮಗಳು ಮತ್ತು ಕೆನಡಾ ಸಂಸದ ಚಂದ್ರ ಆರ್ಯ ಕರ್ನಾಟಕದವರಾಗಿದ್ದು, ಈ ಇಬ್ಬರೂ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿದ್ದಾರೆ ಎಂದರು.

‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕ’ವು ಕಾನೂನಾಗಿ ಜಾರಿಗೊಳ್ಳುವ ಅಗತ್ಯವಿದೆ. ಈ ಬಗ್ಗೆ ಎಲ್ಲ ಶಾಸಕರ ಜೊತೆ ಚರ್ಚಿಸುತ್ತಿದ್ದೇವೆ. ಶಿಕ್ಷಣದಲ್ಲಿ ಕನ್ನಡ, ಆಡಳಿತದಲ್ಲಿ ಕನ್ನಡ, ಉದ್ಯೋಗದಲ್ಲಿ ಕನ್ನಡ, ನಾಮಫಲಕದಲ್ಲಿ ಕನ್ನಡ ಎಂಬ ನಿಯಮಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಿದೆ ಎಂದರು.

error: Content is protected !!