ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಜೂನ್ 1ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಜನರ ಅಗತ್ಯಗಳಿಗಾಗಿ ಮಾರ್ಗಸೂಚಿ ಯಲ್ಲಿ ಬದಲಾವಣೆ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ದಿನಸಿ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಬೆಳಗ್ಗೆ 6 ರಿಂದ 10ರವರೆಗೆ ಗೊಬ್ಬರ, ಬಿತ್ತನೆ ಬೀಜಗಳ ಖರೀದಿ ಗ್ರಾಮೀಣ ಪ್ರದೇಶದಲ್ಲಿ ಅವಕಾಶ ನೀಡಲಾಗಿದೆ. ಆದರೆ ಹಳ್ಳಿ ಯಿಂದ ನಗರಗಳಿಗೆ ಸಂಚಾರ ಮಾಡಲು ಅವಕಾಶವಿಲ್ಲ.
ಜೂನ್ ಒಂದರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದ್ದು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಮುಂದುವರಿಸಲಾಗಿದೆ.