Sunday, 8th September 2024

60 ಸಾವಿರ ಲಂಚ ಸ್ವೀಕಾರ: ಮುಖ್ಯ ಇಂಜನಿಯರ್‌ ಲೋಕಾಯುಕ್ತ ಬಲೆಗೆ

ಶಿರಸಿ: ಕೆಲಸ ಮಾಡಿಕೊಡುವುದಾಗಿ ವ್ಯಕ್ತಿಯೋರ್ವನಿಂದ 60 ಸಾವಿರ ಲಂಚ ಪಡೆಯುತ್ತಿರುವಾಗ ಹಣದ ಸಮೇತ ಹೊನ್ನಾವರದ ಪಟ್ಟಣ ಪಂಚಾ ಯತಿ ಮುಖ್ಯ ಇಂಜನಿಯರ ಪ್ರವೀಣ್‌ ಕುಮಾರ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ ಮಾರ್ಗದರ್ಶನದಲ್ಲಿ ಕಾರವಾರದ ಲೋಕಾಯುಕ್ತ ಇಸ್ಪೆಕ್ಟರ್ ವಿನಾಯಕ್ ಬಿಲ್ಲವರವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಹಣದ ಸಮೇತ ಕಚೇರಿಯಲ್ಲಿ ವಶಕ್ಕೆ ಪಡೆದು ಹೊನ್ನಾವರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶಿಲಿಸುತಿದ್ದು, ಕಾರವಾರ ಲೋಕಾಯುಕ್ತ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!