ಚಿತ್ರದುರ್ಗ: ಪೇಂಟ್ಸ್ ತುಂಬಿದ್ದ ಲಾರಿಗೆ ಮತ್ತೊಂದು ಲಾರಿ ಢಿಕ್ಕಿಯಾಗಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕು ಗೊರಲ ಡುಕು ಬಳಿ ನಡೆದಿದೆ.
ಬುಧವಾರ ಬೆಳಿಗ್ಗೆ ಬೆಂಗಳೂರು ಕಡೆಯಿಂದ ಹಿರಿಯೂರು ಕಡೆ ಬರುತ್ತಿದ್ದ ಏಷಿಯನ್ ಪೇಂಟ್ಸ್ ತುಂಬಿದ್ದ ಲಾರಿಗೆ ಕಂಟೇನರ್ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಲಾರಿ ಹೊತ್ತಿ ಉರಿದಿದೆ. ಅದೃಷ್ಟವ ಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಉರಿಯುವ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.