Sunday, 19th May 2024

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಸ್ವಸ್ಥ, ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್

ಚಿತ್ರದುರ್ಗ: ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿನ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುತ್ತಿದೆ.

ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಡಿವಿಎಸ್​ ಹೋಗಿದ್ದರು. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಕುಸಿದು ಬಿದ್ದಿದ್ದು, ತಕ್ಷಣ ಅಂಗರಕ್ಷಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಬಸವೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದರು.

ಈ ವೇಳೆ ಆಸ್ಪತ್ರೆಗೆ ಶಾಸಕ ತಿಪ್ಪಾರೆಡ್ಡಿ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!