ಬೆಳಗಾವಿ : ಸಭಾಪತಿಗಳ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಸೇರಿ ವಿಧಾನಪರಿಷತ್ನ 14 ಸದಸ್ಯರನ್ನ ಅಮಾನತುಗೊಳಿಸಲಾಗಿದೆ.
ಸದನ ಬಾವಿಗೆ ಇಳಿದು ಪ್ರತಿಭಟನೆ ಮಾಡದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಪಕ್ಷ ನಾಯಕರಿಗೆ ಮನವಿ ಮಾಡಿದರು. ಸಭಾಪತಿಗಳ ಮನವಿಗೆ ಸ್ಪಂದಿಸದ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರೆಸಿದರು. ನಂತರ ಸಭಾಪತಿ ಬಸವರಾಜ ಹೊರಟ್ಟಿ, ಸದನದ ಬಾವಿಗಿಳಿದು ಪ್ರತಿಭಟಿಸಿದ 14 ಸದಸ್ಯರನ್ನ ಒಂದು ದಿನದ ಮಟ್ಟಿಗೆ ಕಲಾಪದಿಂದ ಅಮಾನತುಗೊಳಿಸುವುದಾಗಿ ಆದೇಶ ಹೊರಡಿಸಿದ್ದಾರೆ.