Sunday, 8th September 2024

ಮೊಹರಂ ಹಬ್ಬದ ಪ್ರಯುಕ್ತ ಶಾಂತಿಸಭೆ

ಕೊಲ್ಹಾರ: ಸರ್ಕಾರದ ನಿಯಮಾವಳಿಗಳನ್ನು ಪಾಲನೆ ಮಾಡುವ ಮೂಲಕ ಮೊಹರಂ ಹಬ್ಬವನ್ನು ಸರ್ವರು ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ಅಶೋಕ ಚವ್ಹಾಣ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ರವಿವಾರ ಹಮ್ಮಿಕೊಂಡಿದ್ದ ಶಾಂತಿಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸರ್ವರು ಶಾಂತಿಯುತವಾಗಿ ಮೊಹರಂ ಹಬ್ಬವನ್ನು ಆಚರಣೆ ಮಾಡಬೇಕು. ಸರ್ಕಾರ ವಿಧಿಸಿರುವ ನಿಯಮ ಗಳನ್ನ ಚಾಚು ತಪ್ಪದೆ ಪಾಲನೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಪಿಎಸ್ಐ ಶ್ರೀಮತಿ ಎಸ್.ಸಿ ಗುರುಬೆಟ್ಟಿ, ನಿಡಗುಂದಿ ಪಿಎಸ್ಐ ಯತೀಶ ಕೆ.ಎನ್ ಹಾಗೂ ಪಟ್ಟಣದ ಹಿಂದೂ, ಮುಸ್ಲಿಂ ಸಮಾಜದ ಮುಖಂಡರು ಇದ್ದರು.

Leave a Reply

Your email address will not be published. Required fields are marked *

error: Content is protected !!