Saturday, 26th October 2024

Murder Case: ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಇರಿದು ಕೊಂದ ಪತಿ

Murder Case

ಕೋಲಾರ: ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವುದು (Murder Case) ಕೋಲಾರ ಜಿಲ್ಲೆಯ ಜಮಾಲ್ ಷಾ ನಗರದಲ್ಲಿ ನಡೆದಿದೆ.

ರೋಹಿದ್ ಅಲಿಯಾಸ್ ಅರ್ಬಾಜ್ (25) ಕೊಲೆಯಾದ ಯುವಕ. ಅಮ್ಜದ್ ಕೊಲೆ ಆರೋಪಿ. ರೋಹಿದ್ ಕೆಲ ದಿನಗಳಿಂದ ಅಮ್ಜದ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ. ಇದೇ ವಿಚಾರವಾಗಿ ರೋಹಿದ್‌ಗೆ ಅಮ್ಜಾದ್ ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದ. ಆದರೆ ತನ್ನ ಹಳೇ ಚಾಳಿ ಮುಂದುವರಿಸಿದ್ದ ರೋಹಿದ್‌ನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

ರೋಹಿಸ್‌ನ ಎದೆಗೆ ಚಾಕುವಿನಿಂದ ಇರಿದು ಅಮ್ಜಾದ್ ಕೊಲೆ ಮಾಡಿದ್ದು ಆರೋಪಿಯನ್ನು ಕೋಲಾರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Train derailment Attempt: ತಪ್ಪಿದ ಭಾರೀ ರೈಲು ದುರಂತ; ಹಳಿ ಮೇಲೆ ಮರದ ದಿಮ್ಮಿ ಇಟ್ಟು ಮತ್ತೆ ಕಿಡಿಗೇಡಿಗಳಿಂದ ದುಷ್ಕೃತ್ಯ

ಬೆಂಗಳೂರಿನ ಇಬ್ಬರು ಯುವಕರು ಕುಂದಾಪುರ ಬೀಚ್‌ನಲ್ಲಿ ಮುಳುಗಿ ಸಾವು

Drown In Sea

ಉಡುಪಿ: ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ (Drown In Sea) ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ರೆಸಾರ್ಟ್ ಬಳಿ ನಡೆದಿದೆ. ಯುವಕರು ಶುಭ ಕಾರ್ಯದ ನಿಮಿತ್ತ ಉಡುಪಿಗೆ ಬಂದಿದ್ದ ವೇಳೆ ದುರಂತ ನಡೆದಿದೆ.

ಬೀಜಾಡಿಯಲ್ಲಿ ರೆಸಾರ್ಟ್‌ನಲ್ಲಿ ತಂಗಿದ್ದ ಬೆಂಗಳೂರಿನ ನಾಲ್ವರು ಯುವಕರು ಶನಿವಾರ ಸಮುದ್ರಕ್ಕಿಳಿದಿದ್ದಾರೆ. ಈ ವೇಳೆ ನಾಲ್ವರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಒಬ್ಬ ಯುವಕನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ | Bomb Threat: ತಿರುಪತಿ ಹೊಟೇಲ್‌ಗಳಿಗೆ ಬಾಂಬ್‌ ಬೆದರಿಕೆ; ಉದಯನಿಧಿ ಸ್ಟ್ಯಾಲಿನ್‌ ಪತ್ನಿ ಕೈವಾಡ ಇದೆ ಎಂದು ಇ-ಮೇಲ್‌ ಸಂದೇಶ