Friday, 25th October 2024

ಭದ್ರಾವತಿಯಲ್ಲಿ ರೌಡಿ‌ಶೀಟರ್ ಮುಜೀಬ್ ಹತ್ಯೆ

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ.

ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.

ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ.

13 ವರ್ಷಗಳ ಹಿಂದೆ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಶಿವಮೊಗ್ಗ ಮೂಲದ ಶಹಜಹಾನ್​ ಮತ್ತು ಹಾವೇರಿ ಮೂಲದ ರಫೀಕ್​ ಅಹಮ್ಮದ್ ಎಂಬವರು​ ಪ್ರೀತಿಸಿ ಮದುವೆಯಾಗಿದ್ದರು. ರಫೀಕ್ ಕಳೆದ ಮೂರು ವರ್ಷಗಳ ಹಿಂದಷ್ಟೇ ಕೋಲಾರದ ಮಾಲೂರು ಪಟ್ಟಣದ ವೆಂಕಟೇಶ್​ ಎಂಬವರ ಬಳಿ ಜೆಸಿಬಿ ಆಪರೇಟರ್​ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ರಾಜೀವ್​ ನಗರದ ನಾಸೀರ್ ಎಂಬವರ ಮನೆ ಬಾಡಿಗೆಗೆ ಪಡೆದು ಪತ್ನಿ ಶಹನಾಜ್‌ಳೊಂದಿಗೆ ಸಂಸಾರ ಸಾಗಿಸುತ್ತಿದ್ದನು.

ಆದರೆ, ಎರಡ್ಮೂರು ವರ್ಷಗಳ ನಂತರ ಜೆಸಿಬಿ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದ ರಫೀಕ್ ಕುಡಿತದ ದಾಸನಾಗಿದ್ದು, ಹೆಂಡತಿ ಮೇಲೆ ಹಲ್ಲೆ ನಡೆಸುತ್ತಿದ್ದ. ಕುಡಿಯೋಕೆ ಹಣ ಸಿಗದೇ ಇದ್ದರೆ ಮನೆಯಲ್ಲಿರುವ ಯಾವುದೋ ಒಂದು ವಸ್ತುವನ್ನು ತೆಗೆದು ಕೊಂಡು ಹೋಗಿ ಮಾರಾಟ ಮಾಡುತ್ತಿದ್ದನಂತೆ. ಜೊತೆಗೆ ಇಬ್ಬರಿಗೂ ಮಕ್ಕಳಾಗಿಲ್ಲ ಅನ್ನೋ ಕೊರಗು ಬೇರೆ ಇತ್ತು. ಹೀಗಿರು ವಾಗಲೇ​ (19/07/2023) ಬುಧವಾರ ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ರಫೀಕ್​ ತನ್ನ ಹೆಂಡತಿ ಶಹನಾಜ್​ಳನ್ನು ಹೊಡೆದು ಕೊಂದು ಪರಾರಿಯಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.