Saturday, 27th July 2024

ಉಡುಪಿಯಲ್ಲಿ ಎನ್‌ಡಿಆರ್‌ಎಫ್‌ ಕಾರ‍್ಯಾಚರಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಣಗುಡ್ಡೆ, ಪೆರಂಪಳ್ಳಿ ಪ್ರದೇಶದಲ್ಲಿ ಎನ್.ಡಿ.ಆರ್.ಎಫ್ ಕಾರ‍್ಯಾಚರಣೆ ತೀವ್ರಗತಿಯಲ್ಲಿ ಸಾಗಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ವಿವರ ಪಡೆದಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗೆ ಮುಖ್ಯಮಂತ್ರಿ ಕರೆ
ಮಾಡಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗೋಡೆ ಕುಸಿತವಾಗಿದೆ. ಉತ್ತರ ಒಳನಾಡಿನಲ್ಲಿ ಸೆ.೨೨ರವರೆಗೆ ಭಾರಿ ಮಳೆ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ವ್ಯಾಪಕ ಮಳೆ ಬೀಳುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಸೆ.೨೨ರವರೆಗೆ ಭಾರಿ ಮಳೆ ಮುನ್ಸೂಚನೆಯನ್ನು ವರದಿಗಳು ತಿಳಿಸಿವೆ. ಸೆಪ್ಟೆಂಬರ್‌ ೨೨ರಂದು ಯಲ್ಲೋ ಅಲರ್ಟ್ ಘೋಷಿಸ ಲಾಗಿದೆ.

Leave a Reply

Your email address will not be published. Required fields are marked *

error: Content is protected !!