Saturday, 18th May 2024

ಲೀಡರ್​ಶಿಫ್ ಬದಲಾವಣೆ ಅನಗತ್ಯ ಚರ್ಚೆ, ಯಡಿಯೂರಪ್ಪ ಅವರೇ ಸುಪ್ರೀಂ

ಶಿವಮೊಗ್ಗ: ಬಿ.ಎಸ್​.ಯಡಿಯೂರಪ್ಪರ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂದು ಹರಡಿದ್ದ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿದ ಬಳಿಕ ಈ ಊಹಾಪೋಹಕ್ಕೆಲ್ಲ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿಯುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯೇ ಆಗಿಲ್ಲ. ಇದು ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು ಎಂದರು.

ಲೀಡರ್​ಶಿಫ್ ಬದಲಾವಣೆ ಅನಗತ್ಯ ಚರ್ಚೆ. ಯಡಿಯೂರಪ್ಪ ಅವರೇ ರಾಜ್ಯದ ನಾಯಕರು, ಅವರೇ ಸಿಎಂ. ಪಕ್ಷದಲ್ಲಿ ನಾಯ ಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿಎಂ ಯಡಿಯೂರಪ್ಪ ಅವರೇ ಸುಪ್ರೀಂ, ಸಂಪುಟ ಸರ್ಜರಿ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುವರು ಎಂದು ಘೋಷಿಸಿದರು.

Who is ಯತ್ನಾಳ್… ಯತ್ನಾಳ್ ಯಾರು? ಅವರ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಗಮನ ಹರಿಸುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!