ತುಮಕೂರು: ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹುತ್ತರಿ ದುರ್ಗ ಕೋಟೆಯ ಸುತ್ತ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ಪರಿಸರವನ್ನು ಸ್ವಚ್ಛಗೊಳಿಸಿ ಮಾದರಿಯಾಗಿ ದ್ದಾರೆ.
ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಠಾಣಾ ವ್ಯಾಪ್ತಿಯ ಹುತ್ತರಿ ದುರ್ಗ ಕೋಟೆಯ ಅಕ್ಕಪಕ್ಕದಲ್ಲಿ ಬಹಳ ದಿನಗಳಿಂದ ಬಿದ್ದಿದ್ದ ತ್ಯಾಜ್ಯವನ್ನು ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಸಿಕೃಷ್ಣ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಪ್ರೊಬೆಷನರಿ ಎಸ್ಪಿ ಕನ್ನಿಕ ಸಿಕ್ರಿವಾಲ್, ಹುಲಿಯೂರು ದುರ್ಗ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ವಚ್ಚ ಗೊಳಿಸಿ ಪರಿಸರ ಪ್ರೇಮವನ್ನು ಮೆರೆದಿದ್ದಾರೆ.