ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಶನಿವಾರ ಸಂಸಾರ ಸಮೇತರಾಗಿ ಕೊಡಗು ಜಿಲ್ಲೆಯ ಅಧಿಕೃತ ಬೇಟಿ ಗಾಗಿ ಭಾರತೀಯ ವಾಯುಪಡೆಯ ವಿಶೇಷ ಎಲಿಕಾಪ್ಟರಿನಲ್ಲಿ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರು ರಾಷ್ಟ್ರಪತಿಗಳ ಜೊತೆಯಲ್ಲಿ ಕಾವೇರಿ ಉಗಮಸ್ಥಾನ ತಲ ಕಾವೇರಿಗೆ ಭೇಟಿ ನೀಡುವರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರು ಸಹ ರಾಷ್ಟ್ರಪತಿ ಗಳ ಜೊತೆ ಪ್ರಯಾಣಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.