ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ್ದ ಶಾಂತವೀರ ಸ್ವಾಮೀಜಿಯವರು (80) ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿ, ಶನಿವಾರ ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದ ಸ್ವಾಮೀಜಿಯವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸ ಲಾಗಿದೆ.