Saturday, 20th April 2024

ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು.‌ 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ ಆಗಮಿಸಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿ ತಮ್ಮ ರಾಜೀನಾಮೆ ಪತ್ರ ನೀಡಿದರು.‌ ನಂತರ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದರು.

‌ನಾನು ರಾಜೀನಾಮೆ ನೀಡುವ ಕುರಿತು ನನ್ನನ್ನು ಬಿಜೆಪಿ ಹೈಕಮಾಂಡ್ ಸಂಪರ್ಕಿಸಿ, ಮಾತನಾಡಿದ್ದಾರೆ. ಆದರೆ ಟಿಕೆಟ್​ ನೀಡದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಜೊತೆಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದರು.

30 ವರ್ಷದಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಪಕ್ಷವೂ ನನಗೆ ಸಹಾಯ ಮಾಡಿದೆ. ಆದರೆ ಉತ್ತರ ಕರ್ನಾಟಕ ದಲ್ಲಿ ಪಕ್ಷ ಕಟ್ಟಲು ಸಹಕರಿಸಿದ್ದೇನೆ. ಅಭ್ಯರ್ಥಿಗಳು ಸಿಗದೇ ಹೋದಾಗ ಪ್ರಚಾರ ಮಾಡಿ, ಹಳ್ಳಿ ಹಳ್ಳಿಗಳಲ್ಲಿ ಪಕ್ಷ ಬಲಿಷ್ಠವಾಗಿಸಿದೆ. ಆದರೆ ಈಗ ಮೂಲವಾಗಿ ಬಿಜೆಪಿಯಲ್ಲಿ ಇದ್ದವರನ್ನು ಹೊರಹಾಕಲಾಗುತ್ತಿದೆ. ನಮ್ಮ ಮನೆಯಿಂದ ನಮ್ಮನ್ನು ಹೊರಹಾಕಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾರ ವಿರುದ್ಧವೂ ವೈಯಕ್ತಿಕವಾಗಿ ಹೇಳುವುದಿಲ್ಲ. ಆದರೆ ಕೆಲವರ ಸ್ವಾರ್ಥಕ್ಕಾಗಿ ಹೀಗೆ ಆಗುತ್ತಿದೆ. ನಾನು ಯಾರನ್ನೂ ಸಂಪರ್ಕ ಮಾಡಿಲ್ಲ. ಹುಬ್ಬಳ್ಳಿಗೆ ಹೋಗಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು. ಕಾಂಗ್ರೆಸ್​ಗೆ ಹೋದಾಗ ಅಲ್ಲಿನ ವಿಚಾರ ತೀರ್ಮಾನ ಮಾಡುತ್ತೇನೆ ಎಂದರು.

error: Content is protected !!