Wednesday, 24th April 2024

ಪಿಎಸ್‌ಐ ಮೇಲೆ ಗುಂಡಿನ ದಾಳಿ: ಮೂರು ಮಂದಿ ವಶಕ್ಕೆ

ವಿಟ್ಲ: ವಿಟ್ಲ ಚೆಕ್ ಪೋಸ್ಟ್‌ನಲ್ಲಿ ಶುಕ್ರವಾರ ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ದುಷ್ಕರ್ಮಿಗಳ ತಂಡ ಯತ್ನಿಸಿದ್ದು, ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ಬಿಳಿ ಬಣ್ಣದ ಕಾರೊಂದರಲ್ಲಿ ಇದ್ದ ದುಷ್ಕರ್ಮಿಯೊಬ್ಬ ಎಸ್.ಐ.ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದಾನೆ.

ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಲಾಗುತ್ತಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!