ಬೂತ್ ಮಟ್ಟದ ಸಭೆಯಲ್ಲಿ ಯುವ ಮುಖಂಡ ವಿಶ್ವಾಸ
ತುಮಕೂರು: ಶಿರಾ ಉಪಚುನಾವಣೆಗೆ ಕಾವು ರಂಗೇರಿದ್ದು, ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿರಾ ಕ್ಷೇತ್ರಕ್ಕೆ ಭೇಟಿ ಬೂತ್ ಮಟ್ಟದ ಸಭೆ ನಡೆಸಿದರು.
ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮಾತನಾಡಿದ ವಿಜಯೇಂದ್ರ ಅವರು, ಈ ಹಿಂದೆ ಮಂಡ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ವಿರೋಧ ಪಕ್ಷದವರು ಬೊಬ್ಬೆಹೊಡೆದಿದ್ದರು. ನಮ್ಮನ್ನ ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ.
ಪಕ್ಷದ ಮುಖಂಡರು, ಕಾರ್ಯಕರ್ತರು ಎಲ್ಲಾ ಒಗ್ಗಟ್ಟಾಗಿ ಪ್ರಯತ್ನ ಮಾಡಿದ್ದ ಪರಿಣಾಮ, ಕೆ.ಆರ್.ಪೇಟೆಯಲ್ಲಿ 10 ಸಾವಿರ ಮತಗಳ ಅಂತದಿಂದ ಗೆಲುವು ಸಾಧಿಸಿದ್ದವು. ಅದೇ ರೀತಿ ಶಿರಾದಲ್ಲೂ ಗೆಲುವು ಸಾಧಿಸುತ್ತೇವೆ. ಬಿಜೆಪಿ ಪಕ್ಷದಲ್ಲಿ ಯಾರೇ ಅಭ್ಯರ್ಥಿ ಆದರೂ ಕಣಕ್ಕಿಳಿಸಿದವರನ್ನು ಒಗ್ಗಟ್ಟಾಗಿ ಗೆಲ್ಲಿಸಿಕೊಡುತ್ತೇವೆ ಎಂದರು.
ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆಗೆ ಬಿಜೆಪಿ ಸಜ್ಜುಗೊಳ್ಳುತ್ತಿದೆ. ಶಿರಾ ಕ್ಷೇತ್ರದಲ್ಲಿ ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಇಲ್ಲಿಯೂ ಕಮಲವನ್ನು ಅರಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ ಸುರೇಶ್ ಗೌಡ, ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ, ಕಾರ್ಯಕರ್ತರು ಇದ್ದರು.