Monday, 20th May 2024

ಪರೀಕ್ಷೆ ಬರೆಯುತ್ತಿದ್ದಾಗ ವಿದ್ಯಾರ್ಥಿನಿಗೆ ಹೃದಯಾಘಾತ

ಮೈಸೂರು: ಪರೀಕ್ಷೆ (SSLC) ಬರೆಯುತ್ತಿದ್ದಾಗ ವಿದ್ಯಾರ್ಥಿನಿ (16)ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಮೃತರನ್ನು ಟಿ ನರಸೀಪುರ ತಾಲೂಕಿನ ಅಕ್ಕೂರು ನಿವಾಸಿ ಅನುಶ್ರೀ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸ ಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ SSLC ವಿದ್ಯಾರ್ಥಿನಿ ಸಾವಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸಂತಾಪ ಸೂಚಿಸಿದ್ದಾರೆ. ‘ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಅನುಶ್ರೀ(16) ಅಕಾಲಿಕವಾಗಿ ಮೃತಪಟ್ಟಿ ರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅನುಶ್ರೀ ಪಾಲಕರು, ಸಂಬಂಧಿಕರು, ಸ್ನೇಹಿತರಿಗೆ ನನ್ನ ಸಾಂತ್ವನಗಳು. ಓಂ ಶಾಂತಿ’ ಎಂದು ಟ್ವೀಟ್ ಮಾಡಿದ್ದಾರೆ.

error: Content is protected !!