Saturday, 27th July 2024

ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತ: ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಅಸುನೀಗಿದ ಧಾರುಣ ಘಟನೆ ನಡೆದಿದೆ.

ಪಟ್ಟಣದ ನಿರ್ಮಲಾ ಕಾನ್ವೆಂಟ್‌ನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಪೆಲಿಸಾ ಮೃತ ದುರ್ದೈವಿ. ವಿದ್ಯಾರ್ಥಿನಿ ಪೆಲಿಸಾ ಕಾನ್ವೆಂಟ್‌ನಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದಾಗ ದಿಢೀರನೇ ಕುಸಿದುಬಿದ್ದಿದ್ದಾಳೆ. ಬಳಿಕ, ಆಸ್ಪತ್ರೆಗೆ ರವಾನಿಸಿತರಾದರೂ ಅಷ್ಟರಲ್ಲಾಗಲೇ ಅಸುನೀಗಿದ್ದಾಳೆ.

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮೃತಳ ತಾಯಿ ದೂರು ಕೊಟ್ಟಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

ಪೆಲಿಸಾ ಮೂಲತಃ ಬೆಂಗಳೂರಿನವಳಾಗಿದ್ದು, ಇನ್ನು ಈ ಮೊದಲು ತಂದೆ ಅಸುನೀಗಿದ್ದರಿಂದ ಈಕೆಯನ್ನು ಕ್ರೈಸ್ತ ಮಿಷನರಿ ಸಹಾಯದಿಂದ ವಿದ್ಯಾಭ್ಯಾಸಕ್ಕಾಗಿ ಗುಂಡ್ಲುಪೇಟೆ ನಿರ್ಮಲಾ ಕಾನ್ವೆಂಟ್‌ಗೆ ದಾಖಲಿಸಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!