ಬೆಂಗಳೂರು: ರಾಜ್ಯದಲ್ಲಿ ಕಳೆದ ಭಾನುವಾರ 7,012 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 8,344 ಮಂದಿ ಗುಣಮುಖ ರಾಗಿದ್ದಾರೆ. ಜತೆಗೆ 51 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 10,478ಕ್ಕೇರಿದೆ.
ರಾಜ್ಯದಲ್ಲಿ ದಾಖಲಾದ ಕೊರೊನಾ ಪ್ರಕರಣಗಳು 7.65 ಲಕ್ಷಕ್ಕೇರಿದ್ದು, ಈ ಪೈಕಿ 6.45 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಸುಮಾರು 1.09 ಲಕ್ಷ ಮಂದಿ ಚಿಕಿತ್ಸೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ತಾನು ಅ.17ರ ರಾತ್ರಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ ಎಂದು ಅವರು ಫೇಸ್ಬುಕ್ನಲ್ಲಿ ತಿಳಿಸಿದ್ದಾರೆ.