Wednesday, 8th May 2024

ನಾಳೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಆಡಳಿತ, ವಾಲ್ಮೀಕಿ ಸಮಿತಿ ಹಾಗು ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಭಾಂಗಣದಲ್ಲಿರುವ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಜಯಂತಿ ಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣಧಿಕಾರಿ ರೇಣುಕಾದೇವಿ ತಿಳಿಸಿದ್ದಾರೆ.

ಕೋವಿಡ್ ಹಿನ್ನಲೆಯಲ್ಲಿ ಶ್ರೀ ಮರ್ಹ ವಾಲ್ಮೀಕಿ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದೆಂದು ಹೇಳಿದ್ದಾರೆ.
ವಾಲ್ಮೀಕಿ ಮುಖಂಡ ನಾಗರಾಜು ಮಾತನಾಡಿ ಮಹಾ ದಾರ್ಶನಿಕನಾದ ಶ್ರೀ ವಾಲ್ಮೀಕಿ ಅವರು ಕೇವಲ ಒಂದು ಜಾತಿಗೆ ಸೀಮಿತ ವಲ್ಲ. ಈ ಹಿನ್ನಲೆಯಲ್ಲಿ ಸರ್ವಜನಾಂಗದವರು ಜಯಂತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!