Sunday, 27th October 2024

ಉಪಾಧ್ಯಕ್ಷರಾಗಿ ನರಸಿಂಹ ಮೂರ್ತಿ ಆಯ್ಕೆ

ಚಿಕ್ಕನಾಯಕನಹಳ್ಳಿ : ಬ್ಲಾಕ್ ಕಾಂಗ್ರೆಸ್ ಪಕ್ಷದ ತಾಲ್ಲೂಕು ಉಪಾಧ್ಯಕ್ಷರನ್ನಾಗಿ ನರಸಿಂಹ ಮೂರ್ತಿರವರನ್ನು ತಾಲ್ಲೂಕು ಅಧ್ಯಕ್ಷರಾದ ಬಸವರಾಜು ನೇಮಕಾತಿ ಮಾಡಿರುತ್ತಾರೆ.

ನರಸಿಂಹ ಮೂರ್ತಿರವರು ಹಲವಾರು ವರ್ಷಗಳಿಂದ ಪಕ್ಷದಲ್ಲಿದ್ದು ಅತ್ಯುತ್ತಮ ಸಮಾಜ ಸೇವಕರು, ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.