ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಸರ್ಕಾರ ವಿಧಿಸಿರುವ ವಾರಾಂತ್ಯದ ಕರ್ಫ್ಯೂಗೆ ಕಾಫಿನಾಡಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನಸಂಚಾರ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ರಸ್ತೆಗಳೆಲ್ಲ ಖಾಲಿ ಖಾಲಿ ಯಾಗಿ ಬಿಕೋ ಎನ್ನುತ್ತಿವೆ.
ಭಾನುವಾರ ಅಗತ್ಯ ವಸ್ತುಗಳಾದ ಹಾಲು, ಹಣ್ಣು, ಹೂವು, ದಿನಸಿ ಸೇರಿದಂತೆ ಇತರೆ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸ ಲಾಗಿತ್ತು. ಹಾಲು ಹಣ್ಣು ಖರೀದಿ ಗಿಂತ ಮೀನು, ಮಾಂಸ, ಮೊಟ್ಟೆ ಖರೀದಿಗೆ ಜನರು ಮುಗಿಬಿದ್ದಿದ್ದರು. ಚಿಕನ್, ಮೀನು ಮಾಂಸ ಗಳ ಅಂಗಡಿ ಮುಂದೆ ಜನರು ಸಾಲುಗಟ್ಟಿ ನಿಂತಿದ್ದರು.
10 ಗಂಟೆಯ ಬಳಿಕ ಎಲ್ಲಾ ಅಂಗಡಿ ಬಂದ್ ಮಾಡಿಸಿದ್ದರಿಂದ ಕೆಲವರು ಮೀನು ಮಾಂಸ ಸಿಕ್ಕದೆ ನಿರಾಸೆಯಿಂದ ಮನೆ ಕಡೆಗೆ ಹೆಜ್ಜೆ ಹಾಕಿದರು. 11 ಗಂಟೆಯ ವೇಳೆಗೆ ಗಿಜಿಗುಡುತ್ತಿದ್ದ ಮಾರುಕಟ್ಟೆಗಳೆಲ್ಲ ಸ್ತಬ್ದಗೊಂಡವು. ಕೆಎಸ್ ಆರ್ ಟಿಸಿ ಬಸ್ ಸಂಚಾರ ವಿದ್ದರೂ ಪ್ರಯಾಣಿಕರು ನಿಲ್ದಾಣದ ಕಡೆ ಸುಳಿಯಲಿಲ್ಲ.
ಆಟೋ ಟ್ಯಾಕ್ಸಿ ವಾಹನಗಳು 10 ಗಂಟೆಯವರೆಗೂ ಸಂಚಾರ ನಡೆಸಿದರು. 10 ಗಂಟೆಯ ನಂತರ ಸಂಪೂರ್ಣ ಸ್ತಬ್ದಗೊಂಡಿತು.