ಯಾದಗಿರಿ: ಭಾರತ್ ಬಂದ್ ಅಂಗವಾಗಿ ಮಂಗಳವಾರ ನಗರದ ಹೊಸ ಬಸ್ ನಿಲ್ದಾಣ ಬಳಿ ರೈತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾರ್ಮಿಕ, ರೈತ ಪರ ಸಂಘಟನೆಗಳ ಪದಾಧಿಕಾರಿಗಳು ಧಿಕ್ಕಾರ ಕೂಗಿದರು.
ಅಂಗಡಿ ಮುಗ್ಗಟ್ಟುಗಳು ತೆಗೆದಿವೆ. ಆಟೊ, ಬಸ್ ಸಂಚಾರ ವ್ಯತ್ಯಯವಾಗಿಲ್ಲ. ಪ್ರತಿಭಟನೆಯಲ್ಲಿ ಆರ್ ಕೆಎಸ್, ಎಐಡಿಎಸ್ಒ, ಎಐಯುಟಿಯುಸಿ ಸೇರಿದಂತೆ ಕಾರ್ಮಿಕ, ರೈತ ಸಂಘಟನೆಗಳು ಭಾಗವಹಿಸಿವೆ.