ಉಡುಪಿ: ಯಕ್ಷಗಾನ ಕ್ಷೇತ್ರದಲ್ಲಿ ಅದ್ವಿತಿಯ ಸಾಧನೆ ಮಾಡಿದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ (71) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಯಕ್ಷಗಾನದ ಅಪೂರ್ವ ಕಲಾವಿದರಾಗಿದ್ದ ಮಲ್ಪೆ ರಾಮದಾಸ ಸಾಮಗರ ಪುತ್ರರಾದ ವಾಸುದೇವ ಸಾಮಗ ಕೋಟೇಶ್ವರ ನಿವಾಸಿ ಯಾಗಿದ್ದು ಧರ್ಮಸ್ಥಳ, ಕದ್ರಿ, ಕರ್ನಾಟಕ ಮೇಳ(ಸುರತ್ಕಲ್), ಸಾಲಿಗ್ರಾಮ ಮೇಳದ ಪ್ರಮುಖ ವೇಷಧಾರಿಯಾಗಿ ಜನಮನ ಸೆಳೆದಿದ್ದರು.
ಸಂಯಮ ಸಂಸ್ಥೆ ಮೂಲಕ ತಾಳಮದ್ದಳೆಗೆ ಹೊಸ ಆಯಾಮ, ಹೊಸ ಶಿಸ್ತು ನೀಡಿದ್ದ ಇವರು ವಾಕ್ಚಾತುರ್ಯದಿಂದಲೇ ಯಕ್ಷ ಗಾನ ರಂಗದಲ್ಲಿ ‘ಸಾಮಗೆರ್’ ಎಂದು ಪ್ರಸಿದ್ಧಿ ಪಡೆದಿದ್ದರು. ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದ ಮಲ್ಪೆ ವಾಸುದೇವ ಸಾಮಗರು, ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.