Saturday, 27th July 2024

ವೈ.ಎಸ್.ವಿ.ದತ್ತಾಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಏ.9ರಂದು ಸಭೆ

ಚಿಕ್ಕಮಗಳೂರು: ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಲ್ಲಿ ಸಾವಿರಾರು ಅಭಿಮಾನಿಗಳು ದತ್ತ ಮನೆಯಲ್ಲಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿ, ಪಕ್ಷೇತರವಾಗಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ.

ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಕಳೆದ ಮೂರ್ನಾಲ್ಕು ದಶಕಗಳ ಜೆಡಿಎಸ್ ಸಂಬಂಧ ಕಳೆದು ಕೊಂಡು ಕಳೆದ ಎರಡು ತಿಂಗಳ ಹಿಂದಷ್ಟೆ ಕಾಂಗ್ರೆಸ್ ಸೇರಿದ್ದರು. ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಂತೆ ಅಭಿಮಾನಿಗಳಲ್ಲಿ ಕಾಂಗ್ರೆಸ್ ಟಿಕೆಟ್ ದತ್ತ ಅವರಿಗೆ ಸಿಗಲಿದೆ. ಜಾತ್ಯಾತೀತ ನಾಯಕ ದತ್ತ ಗೆದ್ದೆ ಗೆಲ್ಲುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದರು.

ಕಳೆದ ಮೂರ್ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ಓಡಾಡಿಕೊಂಡು ಪಕ್ಷ ಸಂಘಟನೆ ಮಾಡಿದ್ದ ಕೆ.ಎಸ್.ಆನಂದ್‍ಗೆ ಕಾಂಗ್ರೆಸ್‌ ಪಕ್ಷ ಮಣೆ ಹಾಕಿದೆ.

ಯಾವ ಪಕ್ಷ ಅವಕಾಶ ನೀಡದಿದ್ದರೂ ಚಿಂತೆಯಿಲ್ಲ. ನೀವು ಸ್ಪರ್ಧೆ ಮಾಡಲೇಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷ ನಿಮಗೆ ಟಿಕೆಟ್ ನೀಡದೆ ವಂಚನೆ ಮಾಡಿರುವುದರಿಂದ ಆ ಪಕ್ಷದ ಸಹವಾಸವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ವತಂತ್ರವಾಗಿಯಾದರು ನೀವು ಸ್ಪರ್ಧಿಸಲೇಬೇಕು. ನಿಮ್ಮನ್ನ ಗೆಲ್ಲಿಸುವುದು ನಮ್ಮ ಜವಾಬ್ದಾರಿ. ನಾವೇ ಹಣ ಹಾಕಿಕೊಂಡು ಚುನಾವಣೆ ನಡೆಸುತ್ತೇವೆ ಎಂದು ದತ್ತ ಅಭಿಮಾನಿಗಳು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ವೈ.ಎಸ್.ವಿ.ದತ್ತಾ ಏಪ್ರಿಲ್‌ 9ರಂದು ತಮ್ಮ ಅಭಿಮಾನಿಗಳ ಸಭೆ ಕರೆದಿದ್ದಾರೆ.

error: Content is protected !!