ಬಾಗಲಕೋಟೆ: ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿ ಯನ್ನ ಹೊರತು ಆರ್ಎಸ್ಎಸ್ ಅಲ್ಲ. ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪ ನ್ಮೂಲ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.
ಆರ್ಎಸ್ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆ’ಯ ಉದ್ದೇಶ ಹೊಂದಿದೆ ಎಂದರು.
ದೇವೆಗೌಡರು ಪ್ರಧಾನಿ ಆಗಿದ್ದಾಗ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಇನ್ನಷ್ಟು ದಿನ ಅವರ ಕೈಯಲ್ಲಿ ಆಡಳಿತವಿದ್ದಿದ್ದರೆ ಕಾಶ್ಮೀರ ಪಾಕಿಸ್ತಾನದ ಪಾಲಾಗುತ್ತಿತ್ತು ಎಂದು ವ್ಯಂಗ್ಯ ವಾಡಿದರು.
ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಭಾವನಾತ್ಮಕ ವಿಷಯಗಳನ್ನು ಮುಂದೆ ತರುತ್ತಿವೆ. ನಾವು ಅಭಿವೃದ್ಧಿ ವಿಷಯವನ್ನು ಮುಂದಿಟ್ಟು ಕೊಂಡು ಚುನಾವಣೆ ಎದುರಿಸುತ್ತೇವೆ. ಆರ್ಎಸ್ಎಸ್ ದೇಶಭಕ್ತಿ ಬಗ್ಗೆ ಹೇಳುತ್ತದೆ. ಹೀಗಾಗಿ ಆರ್ಎಸ್ಎಸ್ ಬಗ್ಗೆ ಮಾತನಾಡದಂತೆ ಎಚ್ಚರಿಕೆ ಕೊಡುತ್ತೇನೆ ಎಂದರು.