ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿಕ್ಷಣ
ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಚೆಲ್ಲಾಟವಾಡಿದ ಖಾಸಗಿ ಶಾಲೆ; ಅನುಮತಿ ಪಡೆಯದೆ ಬೇರೊಂದು ಶಾಲೆಗೆ ನೋಂದಣಿ: ಇಂಟರ್ನಲ್‌ ಮಾರ್ಕ್ಸ್‌ ದೊರೆಯದೆ 10 ವಿದ್ಯಾರ್ಥಿನಿಯರು ಫೇಲ್‌

ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಕಳ್ಳಾಟವಾಡಿದ ಖಾಸಗಿ ಶಾಲೆ

Bengaluru News: ಶೇ. 100ರಷ್ಟು ಫಲಿತಾಂಶ ಬರಬೇಕೆಂಬ ಧಾವಂತಕ್ಕೆ ಬಿದ್ದ ಬೆಂಗಳೂರಿನ ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್​​ 10 ವಿದ್ಯಾರ್ಥಿನಿಯರನ್ನು ಅವರ ಪೋಷಕರ ಗಮನಕ್ಕೆ ತಾರದೆ ಅನಾಥ ಮಕ್ಕಳು ಎಂದು ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್​ ಮಾಡಿಸಿದೆ. ಸದ್ಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Madhu Bangarappa: ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.

NEET Results 2025: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ

ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ

NEET UG: ಬಹುನಿರೀಕ್ಷಿತ ಈ ಸಾಲಿನ ನೀಟ್‌ ಪರೀಕ್ಷೆಯ ಪಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿರುವ ಈ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ ಫಲಿತಾಂಶವನ್ನು ಜೂ. 14ರಂದು ಪ್ರಕಟಿಸಲಾಗಿದೆ. ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ.

Tumkur University: ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

Tumkur News: ತುಮಕೂರಿನ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ ಪರಿಚಯ ಮಾಡಿಕೊಡುವ ಉದ್ದೇಶದಿಂದ ನಗರ ಕ್ಯಾಂಪಸ್‌ನಲ್ಲಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಜ್ಞಾನಸಿರಿ ಕ್ಯಾಂಪಸ್‌ಗೆ ಭೇಟಿ ನೀಡುವ ಅವಕಾಶವನ್ನು ಕಲ್ಪಿಸಲಾಗಿತ್ತು. ಪ್ರಶಾಂತ ಪರಿಸರದಲ್ಲಿ ನೆಲೆಸಿರುವ ಈ ಕ್ಯಾಂಪಸ್‌ನಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಇದೆ.

SSLC Exam- 2 Result: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

SSLC Exam- 2 Result: 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​

Media Fest: ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

Tumkur News: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಜೂ.26 ಹಾಗೂ 27ರಂದು ‘ಇಂಪ್ರೆಶನ್-2025’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ತುಮಕೂರು ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

2nd PUC Exam-3: ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ- 3 ಪರೀಕ್ಷೆ, ಈ ಸೂಚನೆಗಳನ್ನು ಪಾಲಿಸಿ

ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ- 3 ಪರೀಕ್ಷೆ, ಈ ಸೂಚನೆ ಪಾಲಿಸಿ

2nd PUC Exam-3: ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.

The Preamble: ಶಾಲಾ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದುವಿಕೆ ಕಡ್ಡಾಯ

ಶಾಲಾ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವಿಕೆ ಕಡ್ಡಾಯ

ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರತಿದಿನ ಪ್ರಾರ್ಥನೆ ವೇಳೆ ಸಂವಿಧಾನದ ಪೀಠಿಕೆ (The Preamble) ಓದುವುದು ಕಡ್ಡಾಯ. ಶಾಲಾ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರದರ್ಶಿಸಬೇಕು ಹಾಗೂ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸಲು ತಿಳಿಸಲಾಗಿದೆ.

Anganwadi Menu: ಅಂಗನವಾಡಿ ಮಕ್ಕಳಿಗೆ ಸಿಗಲಿದೆ ಬಿರಿಯಾನಿ, ಪಲಾವ್, ಸೋಯಾ ಡ್ರೈ ಕರಿ.. ಇನ್ನು  ಹಲವು ವಿಶೇಷ ಖಾದ್ಯಗಳು

ಅಂಗನವಾಡಿ ಮಕ್ಕಳಿಗೆ ಇನ್ಮುಂದೆ ಸಿಗಲಿದೆ ಬಿರಿಯಾನಿ!

ಮೂರು ತಿಂಗಳ ಹಿಂದೆ ತಮ್ಮ ಹಳ್ಳಿಯ ಅಂಗನವಾಡಿಯಲ್ಲಿ ಪುಟಾಣಿ ಶಂಕು ಎಂಬ ಬಾಲಕ "ಉಪ್ಮಾ" ಬದಲಿಗೆ ಬಿರಿಯಾನಿ ಕೇಳಿದ್ದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ (kerala Health Minister Veena George) ಅವರ ಗಮನವನ್ನೂ ಸೆಳೆದಿದೆ. ಇದರ ಪರಿಣಾಮ ಈಗ ಕೇರಳದಾದ್ಯಂತದ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಆಹಾರ ಮೆನುವನ್ನು ಪರಿಷ್ಕರಿಸಲಾಗಿದೆ. ಮಕ್ಕಳಿಗೆ ವಿವಿಧ ರೀತಿಯ ರುಚಿಕರ ಮತ್ತು ಪೌಷ್ಟಿಕ ಆಹಾರ ನೀಡಲು ಪ್ರಾರಂಭಿಸಿದೆ.

Pralhad Joshi: ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್‌ಇ ಅಮೋಘ ಸೇವೆ- ಪ್ರಲ್ಹಾದ್‌ ಜೋಶಿ

ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್‌ಇ ಅಮೋಘ ಸೇವೆ: ಪ್ರಲ್ಹಾದ್‌ ಜೋಶಿ

Pralhad Joshi: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ಗುಣಮಟ್ಟದ ಶಿಕ್ಷಣದ ಜತೆಗೆ ಆರೋಗ್ಯ ಸೇವೆ ಸಹ ಒದಗಿಸುತ್ತ ಸಮಾಜಕ್ಕೆ ಸಮರ್ಪಿಸಿಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

NEET PG 2025: ಜೂ. 15ರಂದು ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಜೂ. 15ರಂದು ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಜೂ. 15ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ 2025 ಪರೀಕ್ಷೆಯನ್ನು ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ ಮುಂದೂಡಿದೆ. ಪಾರದರ್ಶಕತೆ ಮತ್ತು ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Transfer guidelines: ಕೌನ್ಸೆಲಿಂಗ್ ಮೂಲಕ ಗ್ರೂಪ್ ಸಿ, ಡಿ ನೌಕರರ ವರ್ಗಾವಣೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

ಕೌನ್ಸೆಲಿಂಗ್ ಮೂಲಕ ನೌಕರರ ವರ್ಗಾವಣೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

Transfer guidelines: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು, ಆಡಳಿತಾತ್ಮಕ, ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲು ರಾಜ್ಯ ಸರ್ಕಾರ ಕೈಗೊಂಡಿದೆ.

Karnataka Public Schools: ಸಿಎಸ್‌ಆರ್ ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

Karnataka Public Schools: ಸಿಎಸ್‌ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ಸಮನ್ವಯ ಅಧಿಕಾರಿಯಾಗಿ ಗುಂಜನ್ ಕೃಷ್ಣ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಖುಷ್ಬೂ ಜಿ. ಚೌಧರಿ ಅವರನ್ನು ನೇಮಿಸಲಾಗಿದೆ.

Apprenticeship schemes:  ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಯೋಜನೆಯಡಿ ನೀಡುವ ಸ್ಟೈಫಂಡ್​ನಲ್ಲಿ ಶೇ.36ರಷ್ಟು ಹೆಚ್ಚಳ; ಅರ್ಜಿ ಸಲ್ಲಿಸುವುದು ಹೇಗೆ?

ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಯೋಜನೆಯ ಸ್ಟೈಫಂಡ್​ನಲ್ಲಿ ಶೇ.36ರಷ್ಟು ಏರಿಕೆ

ಕೇಂದ್ರ ಸರ್ಕಾರ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಯೋಜನೆಯಡಿ ನೀಡುವ ಸ್ಟೈಫಂಡ್ ಅನ್ನು ಶೇ.36ರಷ್ಟು ಹೆಚ್ಚಿಸಿದೆ. ಈಗ ತಿಂಗಳಿಗೆ 6,800 ರಿಂದ 12,300 ರೂ. ವರೆಗೆ ಸ್ಟೈಫಂಡ್ ಪಡೆಯಬಹುದು. ಈ ಯೋಜನೆಯು ಆರ್ಥಿಕವಾಗಿ ಪ್ರಯೋಜನವನ್ನು ನೀಡುವುದಲ್ಲದೆ, ತರಬೇತಿಯ ಸಮಯದಲ್ಲಿ ಅವರ ಆಸಕ್ತಿಯನ್ನೂ ಹೆಚ್ಚಿಸಲಿದೆ.

CM Siddaramaiah: ಸಂವಿಧಾನವನ್ನು ಎಲ್ಲರೂ ಪಾಲಿಸಬೇಕು: ಸಿದ್ದರಾಮಯ್ಯ

ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ: ಸಿದ್ದರಾಮಯ್ಯ

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೇ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಜ್ಞಾನಿಕ‌ ಗುಣಮಟ್ಟ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

PES University: ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ʼಕಾರ್ಯಾಚರಣೆ ಶೃಂಗಸಭೆ 2025ʼ ಗೆ ಚಾಲನೆ

ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ʼಕಾರ್ಯಾಚರಣೆ ಶೃಂಗಸಭೆ 2025ʼ ಗೆ ಚಾಲನೆ

PES University: ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ (PES University) ಕಾರ್ಯಾಚರಣೆ ಶೃಂಗಸಭೆ 2025 ಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಚರಣೆ ಶೃಂಗಸಭೆಯು ತಂತ್ರಜ್ಞಾನ, ಚುರುಕುತನ ಮತ್ತು ಸುಸ್ಥಿರತೆಯಂತಹ ಪ್ರಮುಖ ಪ್ರವೃತ್ತಿಗಳನ್ನು ಪ್ರದರ್ಶಿಸಿತು. ಈ ಕುರಿತ ವಿವರ ಇಲ್ಲಿದೆ.

SSLC Exam 2: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2: ಈ ನಿಯಮಗಳ ಪಾಲನೆ ಕಡ್ಡಾಯ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2: ಈ ನಿಯಮಗಳ ಪಾಲನೆ ಕಡ್ಡಾಯ

SSLC Exam 2: ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯವಾಗಿದೆ. ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

Ashwini puneeth: ರಾಜಾಜಿನಗರದಲ್ಲಿ ಜೂನಿಯರ್ ಟೋಸ್ ಶುಭಾರಂಭ; ಅಶ್ವಿನಿ ಪುನೀತ್ ಕನಸಿಗೆ ಶಾಸಕ ಗೋಪಾಲಯ್ಯ-ಅನುಶ್ರೀ ಸಾಥ್

ಪುನೀತ್ ಕನಸು ನನಸು: ಜೂನಿಯರ್ ಟೋಸ್ ಪ್ರಿಸ್ಕೂಲ್ ಶುಭಾರಂಭ

ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್‌ ಪ್ರಿಸ್ಕೂಲ್ ಬೆಂಗಳೂರಿನ ರಾಜಾಜಿನಗರದಲ್ಲಿ ಶುಭಾರಂಭಗೊಂಡಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಈ ಶಿಕ್ಷಣದ ಕನಸಿಗೆ ಆ್ಯಂಕರ್ ಅನುಶ್ರೀ ಹಾಗೂ ಶಾಸಕ ಗೋಪಾಲಯ್ಯ ಸಾಥ್ ಕೊಟ್ಟಿದ್ದಾರೆ. ಅಶ್ವಿನಿ ಅವರ ಜತೆ ನಾಯಕತ್ವ ತರಬೇತಿದಾರರು ಮತ್ತು ಪ್ರೇರಕ ಭಾಷಣಕಾರ್ತಿ ಸ್ಫೂರ್ತಿ ವಿಶ್ವಾಸ್, ಸುನೀತಾ ಗೌಡ ಮತ್ತು ಶ್ರುತಿ ಕಿರಣ್‌ ಕೈಜೋಡಿಸಿದ್ದಾರೆ.

CET Results: ಸಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್‌ ಇಲ್ಲಿ ಚೆಕ್‌ ಮಾಡಿ

ಸಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್‌ ಇಲ್ಲಿ ಚೆಕ್‌ ಮಾಡಿ

CET Results announced: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ.

KCET Results 2025: ಇಂದು ಸಿಇಟಿ ಫಲಿತಾಂಶ, ರಿಸಲ್ಟ್‌ ಚೆಕ್​ ಮಾಡುವುದು ಹೇಗೆ? ಇಲ್ಲಿದೆ ವಿವರ

ಇಂದು ಸಿಇಟಿ ಫಲಿತಾಂಶ, ರಿಸಲ್ಟ್‌ ಚೆಕ್​ ಮಾಡುವುದು ಹೇಗೆ? ಇಲ್ಲಿದೆ ವಿವರ

ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ. ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEA ಯ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.

Bengaluru News: ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳು ಗಮನಹರಿಸಲಿ- ತಹಸೀಲ್ದಾರ್ ಬಿ.ಎಸ್.ರಾಜೀವ್

ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳು ಗಮನಹರಿಸಲಿ: ಬಿ.ಎಸ್.ರಾಜೀವ್

Bengaluru News: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಮಾತ್ರ ಐಎಎಸ್, ಐಪಿಎಸ್‌ನಂತ ಉನ್ನತ ಹುದ್ದೆ ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಬಿ.ಎಸ್. ರಾಜೀವ್ ತಿಳಿಸಿದ್ದಾರೆ.

KCET Results 2025: ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ; ಈ ರೀತಿ ರಿಸಲ್ಟ್‌ ಚೆಕ್‌ ಮಾಡಿ

ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ; ಈ ರೀತಿ ರಿಸಲ್ಟ್‌ ಚೆಕ್‌ ಮಾಡಿ

KCET Results 2025: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 15, 16, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿತ್ತು. ಕರ್ನಾಟಕದಲ್ಲಿ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಫಲಿತಾಂಶ ನಿರ್ಣಾಯಕವಾಗಿದೆ.

Karnataka SSLC Exam-2: ಮೇ 26ರಿಂದ ರಾಜ್ಯಾದ್ಯಂತ SSLC ಪರೀಕ್ಷೆ-2, ಈ ನಿಯಮ ಪಾಲನೆ ಕಡ್ಡಾಯ

ಮೇ 26ರಿಂದ ರಾಜ್ಯಾದ್ಯಂತ SSLC ಪರೀಕ್ಷೆ-2, ಈ ನಿಯಮ ಪಾಲನೆ ಕಡ್ಡಾಯ

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Mizoram: ದೇಶದ ಮೊದಲ ಸಂಪೂರ್ಣ ಸಾಕ್ಷರತೆ ಹೊಂದಿದ ರಾಜ್ಯ ಮಿಜೋರಾಂ

ದೇಶದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಮಿಜೋರಾಂ

ಮಿಜೋರಾಂ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಲಾಲ್ದುಹೋಮಾ ಮಿಜೋರಾಂ ಅನ್ನು ದೇಶದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯವೆಂದು ಘೋಷಿಸಿದರು. ರಾಜ್ಯ ಸಾಕ್ಷರತೆಯಲ್ಲಿ 2011ರ ಜನಗಣತಿಯಲ್ಲಿ 3ನೇ ಸ್ಥಾನ ಪಡೆದಿತ್ತು. ಈ ಜನಗಣತಿಯ ಪ್ರಕಾರ ರಾಜ್ಯವು ಶೇ. 91.33ರಷ್ಟು ಸಾಕ್ಷರತೆಯನ್ನು ಹೊಂದಿ, ದೇಶದಲ್ಲಿ ಮೂರನೇ ಸ್ಥಾನದಲ್ಲಿತ್ತು ಎಂದು ಲಾಲ್ದುಹೋಮಾ ತಿಳಿಸಿದ್ದಾರೆ.