ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚುನಾವಣೆ

ಕಾಕ್ರೋಚ್ ಜನತಾ ಪಕ್ಷವು 'ಜಿರಳೆ' ಚುನಾವಣಾ ಚಿಹ್ನೆ ಪಡೆಯಬಹುದೇ? ಈ ಬಗ್ಗೆ ತಜ್ಞರು ಹೇಳೋದೇನು?

ಜಿರಳೆ ಚುನವಣಾ ಚಿಹ್ನೆಯಾಗುತ್ತದೆಯೇ ?

ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಕಾಕ್ರೋಚ್ ಜನತಾ ಪಕ್ಷದ್ದೇ ಹವಾ. ದೇಶದ ರಾಜಕೀಯ ವಲಯದಲ್ಲಿ ಬಹುದೊಡ್ಡ ಸುದ್ದಿ ಮಾಡುತ್ತಿರುವ ಕಾಕ್ರೋಚ್ ಜನತಾ ಪಕ್ಷವು ಜಿರಳೆಯನ್ನು ಚುನಾವಣಾ ಚಿಹ್ನೆಯಾಗಿ ಬಳಸಬಹುದೇ? ಇದಕ್ಕೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗದ ನಿಯಮದಲ್ಲಿ ಏನಿದೆ ಮಾಹಿತಿ ಎಂಬುದರ ಕುರಿತು ಇಲ್ಲಿದೆ ಡಿಟೇಲ್ಸ್.

West Bengal Blection 2026: ʼಜಿರಳೆ ಮೀಸೆ ತಂತ್ರಗಾರಿಕೆʼ ಬಳಸದೆ ಬಿಜೆಪಿ ಗೆದ್ದಿದ್ದು ಬಂಗಾಳದಲ್ಲಿ ಮಾತ್ರ!

ʼಜಿರಳೆ ಮೀಸೆ ತಂತ್ರಗಾರಿಕೆʼ ಬಳಸದೆ BJP ಗೆದ್ದಿದ್ದು ಬಂಗಾಳದಲ್ಲಿ ಮಾತ್ರ!

BJP's election strategy: ಬಂಗಾಳದಲ್ಲಿ ನಿರಂತರ 34 ವರ್ಷ ಅಧಿಕಾರದಲ್ಲಿದ್ದ ಕಮ್ಯುನಿಸ್ಟ್‌ ಪಕ್ಷ ಮತ್ತು ಅದಕ್ಕೂ ಮೊದಲು 30 ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಪಕ್ಷಗಳನ್ನೂ ಬದಿಗೆ ಸರಿಸಿ ಬಿಜೆಪಿ ರನ್ನರ್‌ ಅಪ್‌ ಆಗಿದ್ದು, ಈಗ ಚಾಂಪಿಯನ್‌ ಆಗಿದ್ದು ಸ್ವಂತ ಬಲದಿಂದ. 42 ಲೋಕಸಭೆ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ವಿಜಯ 2029ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹು ದೊಡ್ಡ ಕೊಡುಗೆ ನೀಡಲಿದೆ. ಇದಕ್ಕಿಂತ ಮೊದಲು ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಗುಜರಾತ್‌, ಉತ್ತರಾಖಂಡ್, ಪಂಜಾಬ್, ಗೋವಾ, ಹಿಮಾಚಲ ಪ್ರದೇಶ ಮತ್ತು ಮಣಿಪುರ ವಿಧಾನಸಭೆ ಚುನಾವಣೆಗೂ ಶಕ್ತಿ ತುಂಬಲಿದೆ.

ಸ್ನೇಹಿತರು ಈಗ ವಿರೋಧಿಗಳು; ಸಿಎಂ ವಿಜಯ್, ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್

ತಮಿಳುನಾಡಿನ ಸ್ನೇಹಿತರು ಈಗ ವಿರೋಧಿಗಳು

ಒಂದು ಕಾಲದಲ್ಲಿ ಸ್ನೇಹಿತರಾಗಿದ್ದವರು ಈಗ ತಮಿಳುನಾಡಿನ ರಾಜಕೀಯದಲ್ಲಿ ವಿರೋಧಿಗಳಾಗಿದ್ದಾರೆ. ಬಹಳ ಕಾಲದಿಂದ ಸ್ನೇಹಿತರಾಗಿದ್ದ ನಟ ವಿಜಯ್ ಮತ್ತು ಉದಯನಿಧಿ ಸ್ಟಾಲಿನ್ ಕೆಲವು ವರ್ಷಗಳ ಹಿಂದೆ ಬೇರ್ಪಟ್ಟಿದ್ದರು. ಇದೀಗ ರಾಜಕೀಯ ಅಂಗಣದಲ್ಲಿ ಅವರಿಬ್ಬರೂ ಪರಸ್ಪರರ ವಿರೋಧಿಗಳಾಗಿದ್ದಾರೆ.

Sringeri recount: ಶೃಂಗೇರಿ ಕಾಂಗ್ರೆಸ್‌ ಅಭ್ಯರ್ಥಿ ರಾಜೇಗೌಡಗೆ ಬಿಗ್‌ ರಿಲೀಫ್‌; ಶಾಸಕರಾಗಿ ಮುಂದುವರಿಸಲು ಸುಪ್ರೀಂ ಕೋರ್ಟ್‌ ಆದೇಶ

ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ; ಸುಪ್ರೀಂನಿಂದ ಬಿಗ್‌ ರಿಲೀಫ್‌

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್‌ ಸೂಚನೆ ಮೇರೆಗೆ ನಡೆದ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್‌.ಜೀವರಾಜ್‌ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಹೈಕೋರ್ಟ್‌ ಸೂಚನೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ್ದು, ಯಥಾಸ್ಥಿತಿ ಮುಂದುವರಿಸುವಂತೆ ಸೂಚನೆ ನೀಡಿದೆ.

ಕೇರಳ ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ಬಣಗಳ ನಡುವೆ ಮುಗಿಯದ ಜಗಳ; ಹೈಕಮಾಂಡ್ ನಿರ್ಧಾರ ಏನು?

ಮುಂದುವರಿದ ಪೋಸ್ಟರ್ ಜಗಳ: ಕೇರಳ ಮುಖ್ಯಮಂತ್ರಿ ಯಾರಾಗ್ತಾರೆ?

ವಿಧಾನ ಸಭಾ ಚುನಾವಣೆ ಫಲಿತಾಂಶ ಹೊರಬಿದ್ದು ವಾರ ಕಳೆದರೂ ಕೂಡ ಕೇರಳ ಮುಖ್ಯಮಂತ್ರಿ ಯಾರು ಎನ್ನುವ ಗೊಂದಲ ಇನ್ನೂ ಬಗೆ ಹರಿದಿಲ್ಲ. ಕಾಂಗ್ರೆಸ್ ಬಣಗಳ ನಡುವೆ ಪೋಸ್ಟರ್ ಜಗಳ ಮುಂದುವರಿದಿದ್ದು, ಮುಖ್ಯಮಂತ್ರಿ ಹುದ್ದೆಗೆ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಲು ಇನ್ನೂ ಸಾಧ್ಯವಾಗಲಿಲ್ಲ. ಪಕ್ಷದ ಹೈಕಮಾಂಡ್ ಕೂಡ ಈ ನಿಟ್ಟಿನಲ್ಲಿ ಯಾವುದೇ ಘೋಷಣೆಯನ್ನು ಮಾಡಿಲ್ಲ.

ತಮಿಳುನಾಡಿನ ನೂತನ ಸಿಎಂ ವಿಜಯ್‌ಗೆ  ಅಭಿನಂದನೆ ಸಲ್ಲಿಸಿದ ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್

ನಟ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಉದಯನಿಧಿ ಸ್ಟಾಲಿನ್

ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು ನಮ್ಮ ಪಕ್ಷವು ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿ ಮುಂದೆ ನಿಂತು ಜನರ ಧ್ವನಿಯನ್ನು ಎತ್ತುತ್ತದೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಉತ್ತರಾಧಿಕಾರಿಯಾಗಿ ಮುಖ್ಯಮಂತ್ರಿ ಹುದ್ದೆಗೆ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹುದ್ದೆಗೆ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ಸುವೇಂದು ಅಧಿಕಾರಿಯವರನ್ನು ಆಯ್ಕೆ ಮಾಡಲಾಗಿದೆ. ಇವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ ಮಾಡಲಾಗುತ್ತದೆ ಎನ್ನಲಾಗುತ್ತಿದ್ದರೂ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಾವುದೇ ಘೋಷಣೆಯನ್ನು ಮಾಡಲಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶುಕ್ರವಾರ ಅಧಿಕಾರಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಪಶ್ಚಿಮ ಬಂಗಾಳದಲ್ಲಿ ಹೀನಾಯ ಸೋಲಿನ ಬೆನ್ನಲ್ಲೇ ಟಿಎಂಸಿಯಿಂದ ಗೂಂಡಾಗಿರಿ; ಹಿಂಸಾಚಾರದಲ್ಲಿ ಮೂವರ ಸಾವು: ಕಠಿಣ ಕ್ರಮಕ್ಕೆ ಚುನಾವಣಾ ಆಯೋಗ ಆದೇಶ

ಚುನಾವಣೆ ಬಳಿಕ ಹಿಂಸಾಚಾರ: ಕಠಿಣ ಕ್ರಮಕ್ಕೆ ಆದೇಶ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆ ಬಳಿಕ ಉಂಟಾಗಿರುವ ಗಲಭೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮಕ್ಕೆ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ವಿಧಾನ ಸಭಾ ಚುನಾವಣಾ ಫಲಿತಾಂಶ ಸೋಮವಾರ ಹೊರಬಿದ್ದ ಮೇಲೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಎರಡನೇ ದಿನವು ಮುಂದುವರಿದಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಣೆ; ಪಶ್ಚಿಮ ಬಂಗಾಳದಲ್ಲಿ ಮುಂದೇನಾಗಲಿದೆ? ಕುತೂಹಲ ಕೆರಳಿಸಿದ ಬಿಜೆಪಿ ನಡೆ

ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಣೆ; ಮುಂದೇನು?

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಇದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಮುಂದೆ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಏನೆಲ್ಲಾ ನಡೆಯಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಪಶ್ಚಿಮಬಂಗಾಳದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ

ಪಶ್ಚಿಮಬಂಗಾಳದಲ್ಲಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ

ವಿಧಾನ ಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ಪಶ್ಚಿಮ ಬಂಗಾಳ ಉದ್ವಿಗ್ನವಾಗಿದೆ. ಅಲ್ಲಲ್ಲಿ ಘರ್ಷಣೆಗಳು ನಡೆಯುತ್ತಿವೆ. ಇದೀಗ ಗಸ್ತು ತಿರುಗುತ್ತಿದ್ದ ಮೂವರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಗಸ್ತು ತಿರುಗುತ್ತಿದ್ಧ ಮೂವರು ಪೊಲೀಸರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಪಕ್ಷದ ಕಚೇರಿ ಮೇಲೆ ಬುಲ್ಡೋಜರ್ ದಾಳಿ: ಬಿಜೆಪಿ ವಿರುದ್ಧ ಟಿಎಂಸಿ ಆರೋಪ

ಟಿಎಂಸಿ ಕಚೇರಿ ಮೇಲೆ ಬಿಜೆಪಿ ದಾಳಿ: ವೈರಲ್ ವಿಡಿಯೋ

ಪಶ್ಚಿಮ ಬಂಗಾಳದ ಚುನಾವಣೆ ಬಳಿಕ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ಹಲವಾರು ಆರೋಪಗಳನ್ನು ಮಾಡಿದ್ದು, ಇದೀಗ ಪಕ್ಷದ ಕಚೇರಿ ಮೇಲೆ ಬಿಜೆಪಿ ಯು ಬುಲ್ಡೋಜರ್ ನಿಂದ ದಾಳಿ ನಡೆಸಿದೆ. ಇದಕ್ಕಾಗಿ ಕೇಂದ್ರದಿಂದಲೇ ಆದೇಶ ಬಂದಿದೆ ಎಂದು ಹೇಳಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮುಖ್ಯಮಂತ್ರಿ ಹುದ್ದೆಗಾಗಿ ಕೇರಳದಲ್ಲಿ ಶುರುವಾಯಿತು ಪೋಸ್ಟರ್ ಯುದ್ಧ

ಕೇರಳದಲ್ಲಿ ಈಗ ಸಿಎಂ ಹುದ್ದೆಗೆ ಬಿಗ್ ಫೈಟ್

ಇತ್ತೀಚೆಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಯುಡಿಎಫ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ನಡುವೆ ಮುಖ್ಯಮಂತ್ರಿ ಹುದ್ದೆಗಾಗಿ ಜಗಳ ಶುರುವಾಗಿದೆ. ಮೂವರು ನಾಯಕರು ಸಿಎಂ ಹುದ್ದೆಯ ರೇಸಿನಲ್ಲಿದ್ದು, ಅವರವರ ಬೆಂಬಲಿಗರು ಪ್ರತಿಸ್ಪರ್ಧಿ ನಾಯಕನ ವಿರುದ್ಧ ಪೋಸ್ಟರ್ ಯುದ್ಧ ಪ್ರಾರಂಭಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಹಿಂದಿದೆ 15 ವರ್ಷಗಳ ಪರಿಶ್ರಮ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದರ ಹಿಂದೆ ಒಂದೆರಡು ವರ್ಷಗಳ ಶ್ರಮವಲ್ಲ ಬರೋಬ್ಬರಿ 15 ವರ್ಷಗಳ ಪರಿಶ್ರಮವಿದೆ. 2011ರಿಂದ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಮತದಾರರ ಮೇಲೆ ಪರಿಣಾಮ ಬೀರಲು ಪ್ರಯತ್ನಿಸುತ್ತಿದ್ದು, ಅಂತಿಮವಾಗಿ ಮತದಾರ ಈಗ ಬಿಜೆಪಿ ಕೈ ಹಿಡಿದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು: ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದನೆ

ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ

ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದಿಸಿದ್ದಾರೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದಿದೆ. ಇದೊಂದು ಐತಿಹಾಸಿಕ ವಿಜಯ ಎಂದು ಟ್ರಂಪ್ ಹೇಳಿದ್ದಾರೆ.

ನಾನು ಸೋತಿಲ್ಲ, ರಾಜೀನಾಮೆ ನೀಡೋದಿಲ್ಲ: ಹೀನಾಯವಾಗಿ ಸೋತ ಮಮತಾ ಬ್ಯಾನರ್ಜಿಯಿಂದ ಹೊಸ ವರಸೆ

ರಾಜೀನಾಮೆ ನೀಡೋದಿಲ್ಲ ಎಂದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಾನು ಸೋತಿಲ್ಲ, ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಅವರು ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅವರು ನನ್ನ ರಾಜೀನಾಮೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ, ಸ್ಟಾಲಿನ್‌...; 2026ರ ವಿಧಾನಸಭಾ ಚುನಾವಣೆಯಲ್ಲಿ ಸೋತ ರಾಜಕೀಯ ಧುರೀಣರು

2026ರ ಚುನಾವಣೆಯಲ್ಲಿ ಸೋತ ಪ್ರಮುಖರು

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಹಲವಾರು ಘಟಾನುಘಟಿ ರಾಜಕಾರಣಿಗಳು ಸೋಲು ಅನುಭವಿಸಿದ್ದಾರೆ. ಇದರಲ್ಲಿ ಮುಖ್ಯವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ಸೇರಿದ್ದಾರೆ.

ಟಿವಿಕೆ ಅಭ್ಯರ್ಥಿ ವಿರುದ್ಧ ಡಿಎಂಕೆ ಸಚಿವನನ್ನು ಸೋಲಿಸಿತ್ತು ಕೇವಲ ಒಂದು ಮತ

ತಮಿಳುನಾಡಿನ ಒಂದು ಮತದ ಕಥೆ

ಕೇವಲ ಒಂದೇ ಒಂದು ಮತ ಮಸ್ಕತ್‌ ವ್ಯಕ್ತಿ ಹಾಕದೇ ಇರುತ್ತಿದ್ದರೆ ಅಲ್ಲಿನ ರಾಜಕೀಯ ಚಿತ್ರಣವೇ ಬೇರೆ ಆಗಿರುತ್ತಿತ್ತು. ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಡಿಎಂಕೆ ಸಚಿವನ ಸೋಲಿಗೆ ಕಾರಣವಾಗಿದ್ದು ಕೇವಲ ಒಂದು ಮತ ಎಂದರೆ ಅಚ್ಚರಿಯಾಗಲೇಬೇಕು. ಇದರಿಂದಾಗಿಯೇ ಟಿವಿಕೆ ಅಭ್ಯರ್ಥಿ ಗೆದ್ದರು. ಇಂದು ಒಂದು ಮತದ ಮಹತ್ವದ ಕಥೆಯನ್ನು ಈಗ ಹೇಳುತ್ತಿದೆ.

ದಳಪತಿ ಗೆಲುವಿಗೆ ರಾಹುಲ್ ಗಾಂಧಿ ಅಭಿನಂದನೆ; ಟಿವಿಕೆ ಜೊತೆ ಸೇರಲು ಡಿಎಂಕೆಯೊಂದಿಗಿನ ಮೈತ್ರಿ ಮುರಿಯುತ್ತಾ ಕಾಂಗ್ರೆಸ್?

ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ? ರಾಹುಲ್ ಗಾಂಧಿ ಹೇಳಿದ್ದೇನು?

ಭಾರಿ ಗದ್ದಲದ ನಡುವೆ ಅಧಿಕಾರದ ಗದ್ದುಗೆ ಏರಲು ಈಗ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ದಳಪತಿ ವಿಜಯ್ ಅವರಿಗೆ ಬಹುಮತದ ಸವಾಲು ಎದುರಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಭಾಶಯ ಸಂದೇಶಗಳನ್ನು ಅವರಿಗೆ ಕಳುಹಿಸಿದ್ದು, ಕಾಂಗ್ರೆಸ್ ಮತ್ತು ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನಲಾಗುತ್ತಿದೆ.

624 ಕೋಟಿ ರೂ. ಸಂಪತ್ತಿನ ಒಡೆಯ ನಟ, ರಾಜಕಾರಣಿ ದಳಪತಿ ವಿಜಯ್

ನಟ ವಿಜಯ್ ಅವರ ಸಂಪತ್ತು ಎಷ್ಟಿದೆ ಗೊತ್ತೇ?

ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸುವುದರೊಂದಿಗೆ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ದಶಕಗಳ ಕಾಲ ಆಡಳಿತ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಸೋಲುಣಿಸಿದೆ. ಈ ಮೂಲಕ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಪೂರ್ಣ ಪ್ರಮಾಣದ ರಾಜಕಾರಣಿಯಾಗಿ ಹೊರಹೊಮ್ಮಿದ್ದು, ಇವರ ಒಟ್ಟು ಆಸ್ತಿ ಎಷ್ಟಿದೆ ? ಎನ್ನುವ ಕುರಿತು ವಿವರ ಇಲ್ಲಿದೆ.

Election Results 2026: ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

Laxmi Hebbalkar: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ʼಮೋದಿಮಯ್ ಭಾರತ್ʼ ನಕ್ಷೆ ಬಿಡುಗಡೆ ಮಾಡಿದ ಬಿಜೆಪಿ: ಪಶ್ಚಿಮ ಬಂಗಾಳವನ್ನು ತಲುಪಿದೆ ಕೇಸರಿ ಅಲೆ

ಪಶ್ಚಿಮ ಬಂಗಾಳದಲ್ಲಿ ಈಗ ಕೇಸರಿ ಅಲೆ

ಉತ್ತರ ಭಾರತದ ಐದು ರಾಜ್ಯಗಳನ್ನು ಹೊರತು ಪಡಿಸಿ ಈಗ ಸಂಪೂರ್ಣ ಕೇಸರಿಮಯವಾಗಿದೆ. ಉತ್ತರ ಭಾರತದ ಐದು ರಾಜ್ಯಗಳಾದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್ ಹಾಗೂ ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಹೊರತು ಉಳಿದ ಎಲ್ಲಾ ರಾಜ್ಯಗಳಲ್ಲೂ ಕೇಸರಿ ಪಕ್ಷ ರಾರಾಜಿಸುತ್ತಿದೆ. ಇದೀಗ ಪಶ್ಚಿಮ ಬಂಗಾಳ ಕೂಡ ಕೇಸರಿಮಯವಾಗುವ ಮುನ್ಸೂಚನೆ ಇದೆ.

ಬಾಗಲಕೋಟೆ, ದಾವಣಗೆರೆ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ ಅಭಿನಂದನೆ

ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ ಅಭಿನಂದನೆ

Bagalkot By-Election Results 2026: ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತಚಲಾಯಿಸಿದ್ದಾರೆ. ರಾಜ್ಯದ ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು, ಇದು ಕಾರ್ಯಕರ್ತರ ಗೆಲುವು: ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು: ಕೈ ಅಭ್ಯರ್ಥಿ ಉಮೇಶ್‌ ಮೇಟಿ

Bagalkot By-Election Results: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು 22,332 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ವೀರಣ್ಣ ಚರಂತಿಮಠ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜೇತ ಅಭ್ಯರ್ಥಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.

ಕೇರಳದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮೂವರು ಹಿರಿಯ ಕಾಂಗ್ರೆಸ್ ನಾಯಕರ ಸ್ಪರ್ಧೆ

ಕೇರಳದ ಮುಂದಿನ ಮುಖ್ಯಮಂತ್ರಿ ಯಾರು?

Assembly Election Results 2026: ಕೇರಳ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭಾರಿ ಮುನ್ನಡೆ ಸಾಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಕೂಡ ಹೆಚ್ಚಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಮೂವರು ಹಿರಿಯ ಕಾಂಗ್ರೆಸ್ ನಾಯಕರು ಸ್ಪರ್ಧೆಯಲ್ಲಿದ್ದಾರೆ. ಅವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.

Loading...