AAP MLA Kissing Row: ಮಹಿಳೆಗೆ ಫ್ಲೈಯಿಂಗ್‌ ಕಿಸ್ ಕೊಟ್ಟ ಆಪ್‌ ಶಾಸಕ; ಕೇಸ್‌ ದಾಖಲು!

ದೆಹಲಿ ವಿಧಾನಸಭೆ ಚುನಾವಣೆ ಹೊತ್ತಲ್ಲೇ, ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಸಿಎಂ ಅತಿಶಿ, ಅರವಿಂದ್​ ಕೇಜ್ರಿವಾಲ್​ ಬಳಿಕ ಇದೀಗ ಶಾಸಕ ದಿನೇಶ್ ಮೋಹಾನಿಯಾ ವಿರುದ್ಧ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪ್ರಕರಣ ​ ದಾಖಲಿಸಲಾಗಿದೆ(AAP MLA Kissing Row). ದಿನೇಶ್​ ಮೋಹಾನಿಯಾ ಮಹಿಳೆಯೊಬ್ಬರಿಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಆರೋಪ ಹೊರಿಸಲಾಗಿದೆ.

AAP MLA
Profile Deekshith Nair Feb 5, 2025 12:52 PM

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ(Delhi Election 2025) ಹೊತ್ತಲ್ಲೇ, ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಸಿಎಂ ಅತಿಶಿ, ಅರವಿಂದ್​ ಕೇಜ್ರಿವಾಲ್​ ಬಳಿಕ ಶಾಸಕ(AAP MLA Kissing Row) ದಿನೇಶ್ ಮೋಹಾನಿಯಾ (Dinesh Mohaniya) ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ . ದಿನೇಶ್​ ಮೋಹಾನಿಯಾ ಮಹಿಳೆಯೊಬ್ಬರಿಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಾಸಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸಂಗಮ್ ವಿಹಾರ್ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ದಿನೇಶ್ ಮೋಹಾನಿಯಾ ಸದ್ಯ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಫರ್ಧಿಸಿದ್ದಾರೆ. ಇವರ ವಿರುದ್ಧ ಬಿಜೆಪಿಯ ಚಂದನ್ ಕುಮಾರ್ ಚೌಧರಿ ಮತ್ತು ಕಾಂಗ್ರೆಸ್‌ನ ಹರ್ಷ್ ಚೌಧರಿ ಕಣದಲ್ಲಿದ್ದಾರೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ 70 ವಿಧಾನಸಭಾ ಸ್ಥಾನಗಳಿಗೆ ಮತದಾನ ಆರಂಭವಾಗಿದೆ. ಫೆಬ್ರುವರಿ 8 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.



ಯಮುನಾ ನದಿಗೆ ವಿಷ; ಕೇಜ್ರಿವಾಲ್‌ ಆರೋಪ

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳೆದ ವಾರವಷ್ಟೇ ದೆಹಲಿಗೆ ಕಳುಹಿಸುತ್ತಿರುವ ಯಮುನಾ ನೀರಿಗೆ ವಿಷ ಬೆರೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದರು. ಪ್ರಧಾನಿ ಮೋದಿ, ಹರಿಯಾಣದ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಲವು ನಾಯಕರು ಕೇಜ್ರಿವಾಲ್‌ ವಿರುದ್ಧ ಕಿಡಿಕಾರಿದ್ದರು. ದೆಹಲಿಯ ನೀರು ಸರಬರಾಜಿನ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಕ್ಕಾಗಿ ಚುನಾವಣಾ ಆಯೋಗದಿಂದ ತನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆಮ್ ಆದ್ಮ ಪಕ್ಷದ ನಾಯಕ ಕೇಜ್ರಿವಾಲ್ ಹೇಳಿದ್ದರು.

ಈ ಸುದ್ದಿಯನ್ನೂ ಓದಿ:Delhi Election 2025: ಚುನಾವಣೆಗೆ ಸಜ್ಜಾದ ದೆಹಲಿ; ಮೂರನೇ ಬಾರಿಗೆ ಹ್ಯಾಟ್ರಿಕ್‌ ಬಾರಿಸುತ್ತಾ ಆಪ್‌?

ಕೇಜ್ರಿವಾಲ್‌, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ಅವರೊಂದಿಗೆ ಹರಿಯಾಣವು ಯಮುನಾ ನದಿಗೆ ಕಲುಷಿತ ನೀರನ್ನು ಬಿಡುತ್ತಿದೆ ಎಂಬ ಅವರ ಹೇಳಿಕೆಗೆ ಸಂಬಂಧಿಸಿದಂತೆ ಎರಡನೇ ನೋಟಿಸ್‌ಗೆ ಪ್ರತಿಕ್ರಿಯೆಯನ್ನು ಸಲ್ಲಿಸಲು ಚುನಾವಣಾ ಆಯೋಗದ ಮುಂದೆ ಹಾಜರಾಗಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?