Thursday, 19th September 2024

ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಕೀವ್ : ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತಿಯೊಬ್ಬರೂ ಕೀವ್ ನಿಂದ ಹೊರಹೋಗಬೇಕೆಂದು ಭಾರತೀಯ ರಾಯಭಾರ ಕಚೇರಿ ಈ ಹಿಂದೆ ಆದ್ಯತೆಯ ಮೇಲೆ ಅನುಮೋದನೆ ನೀಡಿತ್ತು ಎಂದು ಹೇಳಿದರು. ವಿದ್ಯಾರ್ಥಿಗಳು ಪ್ರಸ್ತುತ ಯುದ್ಧ ಪೀಡಿತ ದೇಶವಾದ ಉಕ್ರೇನ್ ನಿಂದ ಪಲಾಯನ ಮಾಡುತ್ತಿದ್ದಾರೆ ಮತ್ತು ಭಾರತಕ್ಕೆ ಸುರಕ್ಷಿತವಾಗಿ ಮರಳಲು ಪೋಲೆಂಡ್ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ.

ನಾಲ್ವರು ಕೇಂದ್ರ ಸಚಿವರಾದ ಹರ್ ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಎಂ ಸಿಂಧಿಯಾ, ಕಿರೆನ್ ರಿಜಿಜು ಮತ್ತು ಜನರಲ್ (ರೆಟೆಡ್) ವಿಕೆ ಸಿಂಗ್ ಅವರು ಉಕ್ರೇನ್ ಗಡಿಯಲ್ಲಿರುವ ದೇಶಗಳಲ್ಲಿ ಸ್ಥಳಾಂತರ ಪ್ರಯತ್ನಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.