Friday, 20th September 2024

ಆಪರೇಷನ್​ ಗಂಗಾ: ಮೋದಿಗೆ ಶೇಖ್ ಹಸೀನಾ ಧನ್ಯವಾದ

ಢಾಕಾ: ಉಕ್ರೇನ್​​ನಲ್ಲಿ ಆಪರೇಷನ್​ ಗಂಗಾ ನಡೆಸುತ್ತಿರುವ ಕೇಂದ್ರ ಸರ್ಕಾರ ಬಾಂಗ್ಲಾದೇಶ, ನೇಪಾಳದ ವಿದ್ಯಾರ್ಥಿಗಳ ರಕ್ಷಣೆ ಯಲ್ಲೂ ಭಾಗಿಯಾಗಿದ್ದು, ಇದಕ್ಕಾಗಿ, ಪ್ರಧಾನಿ ಮೋದಿ ಅವರಿಗೆ ಶೇಖ್ ಹಸೀನಾ ಧನ್ಯವಾದ ಅರ್ಪಿಸಿ ದ್ದಾರೆ.

ಉಕ್ರೇನ್​​ನ ವಿವಿಧ ನಗರಗಳಲ್ಲಿ ಸಮಸ್ಯೆಗೆ ಸಿಲುಕಿಕೊಂಡಿದ್ದ ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಬಾಂಗ್ಲಾದೇಶದ ವಿದ್ಯಾರ್ಥಿ ಗಳನ್ನ ರಕ್ಷಣೆ ಮಾಡುವಲ್ಲಿ ಭಾರತದ ರಾಯಭಾರ ಕಚೇರಿ ಯಶಸ್ವಿಯಾಗಿದೆ. ಇದಕ್ಕೆ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಉಕ್ರೇನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಬಾಂಗ್ಲಾದೇಶದ 9 ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿರುವುದಕ್ಕೆ ಶೇಖ್ ಹಸೀನಾ ಭಾರತದ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾಗಿ ವರದಿಯಾಗಿದೆ. ಉಕ್ರೇನ್ ​​- ರಷ್ಯಾ ನಡುವೆ ಬಿಕ್ಕಟ್ಟು ಉಂಟಾಗಿದಾಗಿನಿಂದಲೂ ಕೇಂದ್ರ ಸರ್ಕಾರ ‘ಆಪರೇಷನ್ ಗಂಗಾ’ ಹೆಸರಿನಲ್ಲಿ ರಕ್ಷಣಾ ಕಾರ್ಯಚರಣೆ ಮಾಡುತ್ತಿದೆ.

ನೇಪಾಳ, ಟುನಿಶಿಯಾ, ಬಾಂಗ್ಲಾದೇಶದ ವಿದ್ಯಾರ್ಥಿಗಳಿಗೂ ಭಾರತ ಸರ್ಕಾರ ಸಹಾಯ ಮಾಡುತ್ತಿದೆ. ಭಾರತೀಯ ರಾಯಭಾರ ಕಚೇರಿಗಳ ಸಹಾಯದಿಂದ ವಿವಿಧ ದೇಶಗಳ ವಿದ್ಯಾರ್ಥಿಗಳು ಸುರಕ್ಷಿತವಾಗಿ ಗಡಿಭಾಗಕ್ಕೆ ತೆರಳಿ, ಅಲ್ಲಿಂದ ತಮ್ಮ ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.