Friday, 18th October 2024

ಗೋಟಬಯ ರಾಜಪಕ್ಸ ಸಚಿವ ಸಂಪುಟ ವಿಸ್ತರಣೆ

ಕೊಲಂಬೊ: ಬಿಕ್ಕಟ್ಟಿನ ನಡುವೆಯೂ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಸೋಮವಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. 8 ಮಂದಿಯನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದೆ.

ಡಗ್ಲಾಸ್ ದೇವಾನಂದ (ಮೀನುಗಾರಿಕೆ), ಬಂಡೂಲ ಗುಣವರ್ಧನ (ಸಾರಿಗೆ ಮತ್ತು ಹೆದ್ದಾರಿ, ಸಮೂಹ ಮಾಧ್ಯಮ), ಕೆಹೆಲಿಯಾ ರಂಬೂಕ್‌ವೆಲ್ಲ (ಆರೋಗ್ಯ, ನೀರು ಸರಬರಾಜು), ರಮೇಶ್ ಪತಿರಾನ (ಕೈಗಾರಿಕೆ), ಮಹಿಂದ ಅಮರವೀರ (ಕೃಷಿ, ವನ್ಯಜೀವಿ, ವನ್ಯಜೀವಿ ಸಂರಕ್ಷಣೆ) ಹಾಗೂ ಇತರರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಸ್ವಾತಂತ್ರ್ಯಾ ನಂತರ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸರ್ವಪಕ್ಷಗಳ ನೇತೃತ್ವದ ಸರ್ಕಾರಕ್ಕೆ ಶುಕ್ರವಾರವಷ್ಟೇ 9 ಮಂದಿ ಸಚಿವರ ನೇಮಕ ಮಾಡಲಾಗಿತ್ತು.

ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಕಳೆದ ವಾರ ನಾಲ್ವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು.