ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

"ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು"; ಗಾಜಾ ಯೋಜನೆಗೆ ಅಸ್ತು ಎಂದ ಪ್ರಧಾನಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಇಸ್ರೇಲ್‌ ಪ್ರವಾಸದಲ್ಲಿದ್ದಾರೆ. ಇಸ್ರೇಲ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಮಾತನಾಡಿದ ಪ್ರಧಾನಿ ಮಾನವೀಯತೆಯು ಎಂದಿಗೂ "ಸಂಘರ್ಷದ ಬಲಿಪಶು" ಆಗಬಾರದು ಎಂದು ಹೇಳಿದರು.

ಗಾಜಾ ಯೋಜನೆಗೆ ಅಸ್ತು ಎಂದ ಪ್ರಧಾನಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 26, 2026 6:40 PM

ಟೆಲ್‌ ಅವೀವ್‌: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ಇಸ್ರೇಲ್‌ ಪ್ರವಾಸದಲ್ಲಿದ್ದಾರೆ. ಇಸ್ರೇಲ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಮಾತನಾಡಿದ ಪ್ರಧಾನಿ ಮಾನವೀಯತೆಯು ಎಂದಿಗೂ "ಸಂಘರ್ಷದ ಬಲಿಪಶು" ಆಗಬಾರದು ಎಂದು ಹೇಳಿದರು. ಇಸ್ರೇಲ್‌ನಲ್ಲಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಗಾಜಾ ವಿಷಯದ ಬಗ್ಗೆ ಭಾರತದ ನಿಲುವನ್ನು ಅವರು ಪುನರುಚ್ಚರಿಸಿದರು.

ಭಾರತದ ನಿಲುವು ಸ್ಪಷ್ಟವಾಗಿದೆ, ಮಾನವೀಯತೆಯು ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು. ಗಾಜಾ ಶಾಂತಿ ಯೋಜನೆಯ ಮೂಲಕ ಶಾಂತಿಯ ಹಾದಿಯನ್ನು ಸೃಷ್ಟಿಸಲಾಗಿದೆ. ಭಾರತ ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಭವಿಷ್ಯದಲ್ಲಿಯೂ ಸಹ, ನಾವು ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಹೇಳಿದ್ದಾರೆ. ಭಾರತ ಶಾಂತಿಯ ಪರವಾಗಿದೆ ಎಂಬ ಸಂದೇಶವನ್ನು ಪ್ರಧಾನಿ ಸ್ಪಷ್ಟವಾಗಿ ಹೇಳಿದ್ದಾರೆ, ಜೊತೆಗೆ ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ಹಮಾಸ್ ನಡೆಸಿದ ಹತ್ಯಾಕಾಂಡವನ್ನು ಖಂಡಿಸಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಅನುಮೋದಿಸಿದ ಗಾಜಾ ಶಾಂತಿ ಯೋಜನೆಯು ಈ ಪ್ರದೇಶದಲ್ಲಿ "ನ್ಯಾಯಯುತ ಮತ್ತು ಶಾಶ್ವತ ಶಾಂತಿ"ಯ ಹಾದಿಯಾಗಿದೆ ಎಂದು ಅವರು ಹೇಳಿದರು. ಆದಾಗ್ಯೂ, ಪ್ರಪಂಚದ ಯಾವುದೇ ಭಾಗದಲ್ಲಿ ಭಯೋತ್ಪಾದನೆಯು "ಎಲ್ಲೆಡೆ ಶಾಂತಿಗೆ ಅಪಾಯವನ್ನುಂಟುಮಾಡುತ್ತದೆ" ಎಂದು ಒತ್ತಿ ಹೇಳಿದ್ದಾರೆ. ಶ್ವಸಂಸ್ಥೆಯ ಭದ್ರತಾ ಮಂಡಳಿಯು ಅನುಮೋದಿಸಿದ ಗಾಜಾ ಶಾಂತಿ ಉಪಕ್ರಮವು ಒಂದು ಮಾರ್ಗವನ್ನು ನೀಡುತ್ತದೆ. ಭಾರತವು ಈ ಉಪಕ್ರಮಕ್ಕೆ ತನ್ನ ದೃಢವಾದ ಬೆಂಬಲವನ್ನು ವ್ಯಕ್ತಪಡಿಸಿದೆ.

ಕೋಲಾರದಲ್ಲಿ ಟಾಟಾ-ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ-ಮ್ಯಾಕ್ರನ್ ಚಾಲನೆ

ಪ್ಯಾಲೆಸ್ಟೈನ್ ಸಮಸ್ಯೆಯನ್ನು ಪರಿಹರಿಸುವ ಮೂಲಕ ಸೇರಿದಂತೆ ಈ ಪ್ರದೇಶದ ಎಲ್ಲಾ ಜನರಿಗೆ ನ್ಯಾಯಯುತ ಮತ್ತು ಶಾಶ್ವತವಾದ ಶಾಂತಿಯ ಭರವಸೆಯನ್ನು ಅದು ಹೊಂದಿದೆ ಎಂದು ನಾವು ನಂಬುತ್ತೇವೆ" ಎಂದು ಅವರು ಹೇಳಿದರು. "ನಮ್ಮ ಎಲ್ಲಾ ಪ್ರಯತ್ನಗಳನ್ನು ಬುದ್ಧಿವಂತಿಕೆ, ಧೈರ್ಯ ಮತ್ತು ಮಾನವೀಯತೆಯಿಂದ ಮಾರ್ಗದರ್ಶಿಸೋಣ. ಶಾಂತಿಯ ಹಾದಿ ಯಾವಾಗಲೂ ಸುಲಭವಲ್ಲ. ಆದರೆ ಈ ಪ್ರದೇಶದಲ್ಲಿ ಸಂವಾದ, ಶಾಂತಿ ಮತ್ತು ಸ್ಥಿರತೆಗಾಗಿ ಭಾರತವು ನಿಮ್ಮೊಂದಿಗೆ ಮತ್ತು ಪ್ರಪಂಚದೊಂದಿಗೆ ಸೇರುತ್ತದೆ" ಎಂದು ಪ್ರಧಾನಿ ಮೋದಿ ನೆಸ್ಸೆಟ್‌ನಲ್ಲಿ ಹೇಳಿದ್ದಾರೆ.

ಇಸ್ರೇಲ್ ಭೇಟಿಯನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ ಪ್ರಧಾನಿ ಮೋದಿ, ‘ಸ್ಪೀಕರ್ ಆಫ್ ದಿ ಕೆನೆಸೆಟ್ ಮೆಡಲ್’ ಗೌರವ ಪ್ರದಾನ ಮಾಡಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು. ಅಲ್ಲದೆ, ಈ ಪ್ರಶಸ್ತಿಯನ್ನು ಭಾರತ ಮತ್ತು ಇಸ್ರೇಲ್ ಸ್ನೇಹಕ್ಕೆ ಅರ್ಪಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.