Earthquake: ಭೂಕಂಪಕ್ಕೆ 650 ಕ್ಕೂ ಅಧಿಕ ಮಂದಿ ಬಲಿ; ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ
ಶನಿವಾರ ಮಯನ್ಮಾರ್ನಲ್ಲಿ ಭೂಕಂಪ ಸಂಭವಿಸಿದೆ. ಈ ವರೆಗೆ 650 ಕ್ಕೂ ಅಧಿಕ ಜನರು ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದ್ದು, 1500 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಆಳವಿಲ್ಲದ ಭೂಕಂಪ ಸಂಭವಿಸಿದ್ದು, ದೇಶದ ಹೆಚ್ಚಿನ ಭಾಗಗಳಲ್ಲಿ ಭಾರಿ ವಿನಾಶ ಸಂಭವಿಸಿದೆ.


ನೈಪಿಡಾವ್ : ಶನಿವಾರ ಮಯನ್ಮಾರ್ನಲ್ಲಿ ಭೂಕಂಪ (Earthquake) ಸಂಭವಿಸಿದೆ. ಈ ವರೆಗೆ 650 ಕ್ಕೂ ಅಧಿಕ ಜನರು ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದ್ದು, 1500 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಆಳವಿಲ್ಲದ ಭೂಕಂಪ ಸಂಭವಿಸಿದ್ದು, ದೇಶದ ಹೆಚ್ಚಿನ ಭಾಗಗಳಲ್ಲಿ ಭಾರಿ ವಿನಾಶ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಸಾಗೈಂಗ್ ನಗರದ ವಾಯುವ್ಯಕ್ಕೆ 16 ಕಿ.ಮೀ ದೂರದಲ್ಲಿ ಮತ್ತು 10 ಕಿ.ಮೀ ಆಳದಲ್ಲಿತ್ತು ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮ್ಯಾನ್ಮಾರ್ನಾದ್ಯಂತ ಚಪ್ಪಟೆಯಾದ ಕಟ್ಟಡಗಳು, ಮುರಿದ ಸೇತುವೆಗಳು ಮತ್ತು ಬಿರುಕು ಬಿಟ್ಟ ರಸ್ತೆಗಳು ಕಂಡುಬಂದಿವೆ. ದೇಶದಾದ್ಯಂತ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಅಗತ್ಯ ವಸ್ತುಗಳ ಪೂರೈಸಿದ ಭಾರತ
ಭೂಕಂಪದಿಂದ ತತ್ತರಿಸಿರುವ ಮ್ಯಾನ್ಮಾರ್ ಗೆ ಭಾರತ ನೆರವಿನ ಹಸ್ತ ಚಾಚಿದೆ. ಔಷಧಿಗಳು,ಲಸಿಕೆಗಳು ಸೇರಿದಂತೆ ಅನೇಕ ಅತ್ಯಗತ್ಯ ವಸ್ತುಗಳನ್ನು ಭಾರತ, ಮ್ಯಾನ್ಮಾರ್ ಗೆ ರವಾನಿಸಿದೆ. ಹಿಂಡನ್ ವಾಯುಪಡೆಯ ನಿಲ್ದಾಣದಿಂದ IAF C 130 J ವಿಮಾನದ ಮೂಲಕ ಪರಿಹಾರ ಸಾಮಗ್ರಿಗಳನ್ನು ಮ್ಯಾನ್ಮಾರ್ಗೆ ಕಳುಹಿಸಲಾಗಿದೆ. ಪರಿಹಾರ ಸಾಮಗ್ರಿಗಳಲ್ಲಿ ಡೇರೆಗಳು, ಮಲಗುವ ಚೀಲಗಳು, ಕಂಬಳಿಗಳು, ತಿನ್ನಲು ಸಿದ್ಧವಾದ ಊಟಗಳು, ನೀರು ಶುದ್ಧೀಕರಣ ಯಂತ್ರಗಳು, ನೈರ್ಮಲ್ಯ ಕಿಟ್ಗಳು, ಸೌರ ದೀಪಗಳು, ಜನರೇಟರ್ ಸೆಟ್ಗಳು ಮತ್ತು ಪ್ಯಾರಸಿಟಮಾಲ್, ಪ್ರತಿಜೀವಕಗಳು, ಕ್ಯಾನುಲಾ, ಸಿರಿಂಜ್ಗಳು, ಕೈಗವಸುಗಳು, ಹತ್ತಿ ಬ್ಯಾಂಡೇಜ್ಗಳು ಮತ್ತು ಮೂತ್ರ ಚೀಲಗಳು ಸೇರಿದಂತೆ ಅಗತ್ಯ ಔಷಧಿಗಳು ಸೇರಿವೆ.
As always, India remains a first responder when her friends face challenging times
— Shreya Upadhyaya (@ShreyaOpines) March 29, 2025
15 tonnes of relief material reaches #Myanmar - includes tents, sleeping bags, blankets, ready-to-eat meals, water purifiers, hygiene kits, medicines and medical equipment#MyanmarEarthquake pic.twitter.com/WIwR8RaGp8
ಭಾರತವು ಮ್ಯಾನ್ಮಾರ್ ಜನರಿಗೆ ತುರ್ತು ಮಾನವೀಯ ನೆರವಿನ ಮೊದಲ ಕಂತನ್ನು ರವಾನಿಸಿದೆ. ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಭೂಕಂಪ ಸಂಭವಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡುವುದಾಗಿ ಭರವಸೆ ನೀಡಿದೆ. ದೇಶವು ಎಲ್ಲಾ ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದು ಹೇಳಿದ್ದರು.
ಈ ಸುದ್ದಿಯನ್ನೂ ಓದಿ: Earthquake: ಮಯನ್ಮಾರ್ನಲ್ಲಿ ಭೂಕಂಪ; 20 ಕ್ಕೂ ಅಧಿಕ ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ
Concerned by the situation in the wake of the Earthquake in Myanmar and Thailand. Praying for the safety and wellbeing of everyone. India stands ready to offer all possible assistance. In this regard, asked our authorities to be on standby. Also asked the MEA to remain in touch…
— Narendra Modi (@narendramodi) March 28, 2025
ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ಪರಿಸ್ಥಿತಿ ಕಳವಳಕಾರಿಯಾಗಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಭಾರತ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ, ನಮ್ಮ ಅಧಿಕಾರಿಗಳನ್ನು ಸನ್ನದ್ಧವಾಗಿ ಇರಿಸಿಕೊಳ್ಳಲು ಕೇಳಿಕೊಂಡಿದ್ದೇವೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರಲು ವಿದೇಶಾಂಗ ಸಚಿವಾಲಯವನ್ನು ಕೇಳಿಕೊಂಡಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.