ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Temple Demolished: ಢಾಕಾದಲ್ಲಿ ದೇವಾಲಯ ಧ್ವಂಸ; ಹಿಂದೂಗಳನ್ನು ರಕ್ಷಿಸುವಂತೆ ಬಾಂಗ್ಲಾದೇಶಕ್ಕೆ ಭಾರತ ಒತ್ತಾಯ

ಬಾಂಗ್ಲಾದೇಶದಲ್ಲಿ ದುರ್ಗಾ ದೇವಸ್ಥಾನವನ್ನು ಧ್ವಂಸಗೊಳಿಸಿದ್ದು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಂಗ್ಲಾದೇಶದ ಅಧಿಕಾರಿಗಳು ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದು, ಇದನ್ನು ಅಕ್ರಮವಾಗಿ ನಿರ್ಮಿಸಲಾದ 'ತಾತ್ಕಾಲಿಕ ರಚನೆ' ಎಂದು ಕರೆದಿದ್ದಾರೆ. ಬಾಂಗ್ಲಾದೇಶ ರೈಲ್ವೆ ಅಧಿಕಾರಿಗಳು, ಪೊಲೀಸ್ ಮತ್ತು ಮಿಲಿಟರಿ ಸಿಬ್ಬಂದಿಗಳ ಸಹಾಯದಿಂದ ದೇವಾಲಯವನ್ನು ಕಡೆವಲಾಗಿತ್ತು.

ಢಾಕಾದಲ್ಲಿ ದೇವಾಲಯ ಧ್ವಂಸ, ಹಿಂದೂಗಳನ್ನು ರಕ್ಷಿಸುವಂತೆ ಭಾರತ ಒತ್ತಾಯ

Profile Vishakha Bhat Jun 27, 2025 4:55 PM

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ದುರ್ಗಾ ದೇವಸ್ಥಾನವನ್ನು ಧ್ವಂಸಗೊಳಿಸಿದ್ದು, (Temple Demolished) ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಂಗ್ಲಾದೇಶದ ಅಧಿಕಾರಿಗಳು ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದು, ಇದನ್ನು ಅಕ್ರಮವಾಗಿ ನಿರ್ಮಿಸಲಾದ 'ತಾತ್ಕಾಲಿಕ ರಚನೆ' ಎಂದು ಕರೆದಿದ್ದಾರೆ. ಢಾಕಾದ ಖಿಲ್ಖೇತ್‌ನಲ್ಲಿರುವ ದುರ್ಗಾ ದೇವಾಲಯವನ್ನು ಕೆಡವಲು ಉಗ್ರಗಾಮಿಗಳು ಕೂಗುತ್ತಿದ್ದರು ಎಂದು ನಮಗೆ ಅರ್ಥವಾಗಿದೆ. ಮಧ್ಯಂತರ ಸರ್ಕಾರವು ದೇವಾಲಯಕ್ಕೆ ಭದ್ರತೆಯನ್ನು ಒದಗಿಸುವ ಬದಲು, ಈ ಘಟನೆಯನ್ನು ಅಕ್ರಮ ಭೂ ಬಳಕೆಯ ಪ್ರಕರಣವೆಂದು ಬಿಂಬಿಸಿ ಇಂದು ದೇವಾಲಯದ ನಾಶಕ್ಕೆ ಅವಕಾಶ ನೀಡಿತು" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಬಾಂಗ್ಲಾದೇಶ ರೈಲ್ವೆ ಅಧಿಕಾರಿಗಳು, ಪೊಲೀಸ್ ಮತ್ತು ಮಿಲಿಟರಿ ಸಿಬ್ಬಂದಿಗಳ ಸಹಾಯದಿಂದ ದೇವಾಲಯವನ್ನು ಕಡೆವಲಾಗಿತ್ತು. ಬುಲ್ಡೋಜರ್‌ಗಳು ದೇವಾಲಯವನ್ನು ಕೆಡವುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದರಿಂದಾಗಿ ದೇವರ ಮೂರ್ತಿಯನ್ನು ಸ್ಥಳಾಂತರಿಸುವ ಮೊದಲೇ ಹಾನಿಯಾಗಿದೆ. ಬಾಂಗ್ಲಾದೇಶದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿರುವುದು ನಮಗೆ ಬೇಸರ ತಂದಿದೆ. ಹಿಂದೂಗಳು, ಅವರ ಆಸ್ತಿಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ರಕ್ಷಿಸುವುದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನಾನು ಒತ್ತಿ ಹೇಳುತ್ತೇನೆ" ಎಂದು ಜೈಸ್ವಾಲ್‌ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿSheikh Hasina: ಬಾಂಗ್ಲಾದೇಶದಿಂದ ಶೇಖ್ ಹಸೀನಾ ಪಲಾಯನ ಮಾಡಿದ್ದು ಹೇಗೆ? ಬಯಲಾಯ್ತು ನಿಜಾಂಶ

ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿರುವ ಬಗ್ಗೆ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದೆ. ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರು ನಾಯಕರ ನಡುವಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೂನಸ್‌ ಅವರೊಂದಿಗೆ ಈ ಕುರಿತು ಮಾತನಾಡಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ಭಾರತದ ಕಳವಳಗಳನ್ನು ಪ್ರಧಾನಿ ಮೋದಿ ಒತ್ತಿ ಹೇಳಿದ್ದರು ಮತ್ತು ಮುಹಮ್ಮದ್ ಯೂನಸ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಬಾಂಗ್ಲಾದೇಶ ಸರ್ಕಾರವು ಅವರ ವಿರುದ್ಧ ನಡೆದ ದೌರ್ಜನ್ಯ ಪ್ರಕರಣಗಳನ್ನು ಕೂಲಂಕಷವಾಗಿ ತನಿಖೆ ಮಾಡುವ ಮೂಲಕ ಅವರ ಭದ್ರತೆಯನ್ನು ಖಚಿತಪಡಿಸುತ್ತದೆ ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದರು.