ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Donald Trump: "ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕಾಗಿ ನನಗೇನು ನೊಬೆಲ್ ಪ್ರಶಸ್ತಿ ಬೇಡ; ತನ್ನನ್ನು ತಾನು ಶಾಂತಿದೂತ ಎಂದ ಟ್ರಂಪ್‌!

ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಕದನ ವಿರಾಮ ಘೋಷಿಸಿದ್ದೇ ನಾನು ಎಂದು ಬಡಾಯಿ ಕೊಚ್ಚಿಕೊಳ್ಳು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇದೀಗ ಮತ್ತೊಂದು ಹೆಜ್ಜೆ ಮುಂದೆ ನಾನು ಶಾಂತಿ ಕಾಪಾಡಿದ್ದೇನೆ. ಅದಕ್ಕಾಗೆ ನಾನೇನು ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕಾಗಿ ನೊಬೆಲ್ ಪ್ರಶಸ್ತಿ ಬೇಡ; ಟ್ರಂಪ್‌

Profile Vishakha Bhat Jun 21, 2025 10:54 AM

ವಾಷಿಂಗ್ಟನ್‌: ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಕದನ ವಿರಾಮ ಘೋಷಿಸಿದ್ದೇ ನಾನು ಎಂದು ಬಡಾಯಿ ಕೊಚ್ಚಿಕೊಳ್ಳು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಇದೀಗ ಮತ್ತೊಂದು ಹೆಜ್ಜೆ ಮುಂದೆ ನಾನು ಶಾಂತಿ ಕಾಪಾಡಿದ್ದೇನೆ. ಅದಕ್ಕಾಗೆ ನಾನೇನು ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ತಿಂಗಳು ಉಭಯ ದೇಶಗಳ ನಡುವಿನ ಸಂಭಾವ್ಯ ಯುದ್ಧವನ್ನು "ನಿಲ್ಲಿಸಿದ್ದಕ್ಕಾಗಿ" ಯಾರೂ ನನಗೆ ನೊಬೆಲ್‌ ಪ್ರಶಸ್ತಿ ಕುರಿತು ಹೇಳಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಾನು ಏನು ಮಾಡಿದ್ದೇನೆ ಎಂಬುದು ಜಗತ್ತಿಗೆ ತಿಳಿದಿದೆ. ನನಗೆ ಯಾವುದೇ ಪ್ರಶಸ್ತಿಯ ಅಗತ್ಯವಿಲ್ಲ ಎಂದು ಟ್ರಂಪ್‌ ಹೇಳಿದರು. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ನಡುವೆ ವಾಷಿಂಗ್ಟನ್‌ನಲ್ಲಿ ನಡೆದ ಶಾಂತಿ ಒಪ್ಪಂದದ ನಂತರ ಅಮೆರಿಕ ಅಧ್ಯಕ್ಷರು ಈ ಹೇಳಿಕೆ ನೀಡಿದ್ದಾರೆ. "ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ: Donald Trump: ಭಾರತ ಪಾಕ್‌ ಕದನ ನಿಲ್ಲಿಸಿದಂತೆ ಇರಾನ್‌ ಇಸ್ರೇಲ್‌ ಯುದ್ಧವನ್ನೂ ಕೊನೆಗಾಣಿಸುತ್ತೇನೆ; ಡೊನಾಲ್ಡ್‌ ಟ್ರಂಪ್‌

ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ತಾನೇ ಕಾರಣ ಎಂದು ಟ್ರಂಪ್‌ ಎಲ್ಲೆಡೆ ಹೇಳಿಕೊಂಡಿದ್ದರು. ಈ ಬಗ್ಗೆ ಭಾರತ ಹಲವು ಬಾರಿ ಆಕ್ಷೇಪವನ್ನೂ ವ್ಯಕ್ತಪಡಿಸಿತ್ತು. ಇತ್ತೀಚೆಗೆ ಪ್ರಧಾನಿ ಮೋದಿ ಟ್ರಂಪ್‌ಗೆ ಕರೆ ಮಾಡಿದಾಗಲೂ ನಾವು ಯಾರ ಒತ್ತಡಕ್ಕೂ ಮಣಿದಿಲ್ಲ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಭಾರತ ಎಂದಿಗೂ ಮಣಿಯುವುದಿಲ್ಲ ಎಂದು ಹೇಳಿದ್ದರು.