ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗದಗ

ಸರ್ಕಾರಕ್ಕೆ ನಿಧಿ ಹಸ್ತಾಂತರಿಸಿದ್ದ ಲಕ್ಕುಂಡಿಯ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸೈಟ್‌ ಘೋಷಣೆ

ಸರ್ಕಾರಕ್ಕೆ ನಿಧಿ ಒಪ್ಪಿಸಿದ್ದ ಲಕ್ಕುಂಡಿಯ ರಿತ್ತಿ ಕುಟುಂಬಕ್ಕೆ ಸೈಟ್‌

ಮನೆಗೆ ಪಾಯ ಅಗೆಯುವಾಗ ಸಿಕ್ಕಿದ್ದ ನಿಧಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತಿಸಿದ್ದ ರಿತ್ತಿ ‌ಕುಟುಂಬಕ್ಕೆ 30*40 ಸೈಟ್ ನೀಡುವ ನಿರ್ಣಯವನ್ನು ಗ್ರಾಮ ಪಂಚಾಯಿತಿ ಪಾಸ್ ಮಾಡಿದೆ. ಮಾನವೀಯ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಗ್ರಾಮ ಪಂಚಾಯಿತಿ ಸೈಟ್‌ ನೀಡುವ ನಿರ್ಧಾರ ತೆಗೆದುಕೊಂಡಿದೆ.

Gadag News: ಮೇಲಧಿಕಾರಿಗಳ ಕಿರುಕುಳ; ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ

ಕಂದಾಯ ಇಲಾಖೆಯಲ್ಲಿ ಸಮರ್ಪಕವಾಗಿ ನಿರ್ವಹಿಸಿದರೂ ಮೇಲಧಿಕಾರಿಳು ಕಿರುಕುಳ ನೀಡುತ್ತಿದ್ದಾರೆ. ವಿನಾಕಾರಣ ಮೇಲಿಂದ ಮೇಲೆ ನೋಟಿಸ್ ನೀಡಿರುವುದಲ್ಲದೆ, ಕಳೆದ 2 ತಿಂಗಳಿಂದ ವೇತನ ತಡೆಹಿಡಿಯಲಾಗಿದೆ. ನನಗೆ ಅನಾರೋಗ್ಯ ಪೀಡಿತ ತಾಯಿ ಇದ್ದಾರೆ. ನನಗೂ ಆರೋಗ್ಯ ಸಮಸ್ಯೆ ಇರುವುದರಿಂದ ಜೀವನ ಕಷ್ಟವಾಗಿದೆ. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ರಾಷ್ಟ್ರಪತಿಗಳಿಗೆ ಸರ್ಕಾರಿ ನೌಕರ ಮನವಿ ಮಾಡಿದ್ದಾರೆ.

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ! ಬೆಚ್ಚಿ ಬಿದ್ದ ಅಧಿಕಾರಿಗಳು

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ!

ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಇದೀಗ ಅದೇ ಜಾಗದಲ್ಲಿ ದೊಡ್ಡ ಹಾವೊಂದು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

Lakkundi Excavation: ಲಕ್ಕುಂಡಿಯಲ್ಲಿ ಉತ್ಖನನ: ಎರಡನೇ ದಿನ ಶಿವಲಿಂಗದ ಪೀಠ ಪತ್ತೆ, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

ಲಕ್ಕುಂಡಿಯಲ್ಲಿ ಶಿವಲಿಂಗದ ಪೀಠ ಪತ್ತೆ, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಪುರಾತತ್ವ ಇಲಾಖೆಯ ವತಿಯಿಂದ ಹಂತ ಹಂತವಾಗಿ ಉತ್ಖನನ ಕಾರ್ಯ ನಡೆಯುತ್ತಿದೆ. ಉತ್ಖನನದ ಎರಡನೇ ದಿನದ ಆರಂಭದಲ್ಲೇ ಶಿವಲಿಂಗ ಪೀಠದ ಮಾದರಿಯ ಪುರಾತನ ಅವಶೇಷ ಗೋಚರವಾಗಿದ್ದು, ಇದು ಶೈವ ಸಂಸ್ಕೃತಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ಕುರುಹು ಎಂದು ಪುರಾತತ್ವ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Lakkundi gold treasure: ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ; ಇಡೀ ಗ್ರಾಮ ಸ್ಥಳಾಂತರ?

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ; ಇಡೀ ಗ್ರಾಮ ಸ್ಥಳಾಂತರ?

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನಗಳಿವೆ. ಹೀಗಾಗಿ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಪ್ರಮಾಣದ ನಿಧಿಯಿದೆ ಎನ್ನಲಾಗುತ್ತಿದೆ. ಹೀಗಾಗಿ ಲಕ್ಕುಂಡಿ ಗ್ರಾಮವನ್ನು ಸ್ಥಳಾಂತರ ‌ಮಾಡಬೇಕು. ಆಗ ಮಾತ್ರ ಲಕ್ಕುಂಡಿ ಗ್ರಾಮದಲ್ಲಿ ನಿಧಿ ರಹಸ್ಯ ಬಯಲಾಗುತ್ತದೆ. ಇದರಿಂದ ಗ್ರಾಮವನ್ನ ಸ್ಥಳಾಂತರ ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಎಚ್​​​ಕೆ ಪಾಟೀಲ್ ಹೇಳಿದ್ದಾರೆ.

Lakkundi Gold Treasure: ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!

ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!

ರಿತ್ತಿ ಕುಟುಂಬದ ಸದಸ್ಯರಿಗೆ, ನಿಧಿ ಪತ್ತೆಯಾದ ಬಳಿಕ ಆ ಜಾಗದಲ್ಲಿ ಅನಾಹುತಗಳು ಸಂಭವಿಸುವ ಭಯ ಕಾಡುತ್ತಿದೆ. “ಆ ಜಾಗದಿಂದ ದೊಡ್ಡ ಸರ್ಪ ಎದ್ದಿದೆ. ಒಂದಲ್ಲ ಒಂದು ದಿನ ಕಚ್ಚಬಹುದು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ನಮಗೆ ಒಬ್ಬನೇ ಮಗ ಇದ್ದಾನೆ. ಅವನ ಭವಿಷ್ಯ ನಮಗೆ ಮುಖ್ಯ. ಹೀಗಾಗಿ ಆ ಜಾಗ ನಮಗೆ ಬೇಡ” ಎಂದು ಕುಟುಂಬಸ್ಥರು ಹೇಳಿದ್ದಾರೆ.

Lakkundi gold treasure: ಲಕ್ಕುಂಡಿಯಲ್ಲಿ ನಿಧಿ ಪತ್ತೆ, ನಿಧಿ ಸಿಕ್ಕ ಮನೆಯವರಿಗೆ ಬೀದಿಪಾಲಾಗುವ ಭೀತಿ! ಪ್ರಾಮಾಣಿಕತೆಯೇ ಮುಳುವಾಯ್ತಾ?

ಲಕ್ಕುಂಡಿಯಲ್ಲಿ ನಿಧಿ ಪತ್ತೆ, ನಿಧಿ ಸಿಕ್ಕ ಮನೆಯವರಿಗೆ ಬೀದಿಪಾಲಾಗುವ ಭೀತಿ!

ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾಗಿತ್ತು. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದೆ.

Karwar-Ilkal Road: ಕಾರವಾರ-ಇಳಕಲ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ: ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

ಕಾರವಾರ-ಇಳಕಲ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ: ಗಡ್ಕರಿ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾರವಾರ - ಇಳಕಲ್ ರಾಷ್ಟ್ರೀಯಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ, ಕಾಮಗಾರಿ ಪ್ರಾರಂಭಿಸುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಇತ್ತೀಚೆಗೆ ಮನವಿ ಮಾಡಿದ್ದರು.

Bomb threat: ಮಂಗಳೂರಿನ ಆರ್‌ಟಿಒ ಕಚೇರಿ, ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ!

ಮಂಗಳೂರಿನ ಆರ್‌ಟಿಒ ಕಚೇರಿ, ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ!

ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇದರಿಂದ ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು, ಬಾಂಬ್‌ ಸ್ಕ್ವಾಡ್‌ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

CPI PV Salimath: ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಸಜೀವ ದಹನಗೊಂಡ ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಹುಬ್ಬಳ್ಳಿಯಿಂದ ಗದಗಿಗೆ ಹೋಗುವಾಗ ಡಿವೈಡರ್​ಗೆ ಮೊದಲು ಕಾರು ಡಿಕ್ಕಿಯಾಗಿ, ಪಕ್ಕದಲ್ಲಿದ್ದ ರಸ್ತೆಗೆ ಜಂಪ್ ಆಗಿದೆ. ತಾವು ಹೋಗುತ್ತಿದ್ದ ಮಾರ್ಗದ ಎದುರು ಬದಿಯ ರಸ್ತೆಯನ್ನು ಇಳಿದು ಮತ್ತೆ ಮೇಲಕ್ಕೆ ಬಂದು ನಂತರ ಮತ್ತೆ ರಸ್ತೆ ಪಕ್ಕದಲ್ಲಿ ಹೋಗಿ ನಿಂತಿದೆ. ಈ ಸಮಯದಲ್ಲಿ ಪೆಟ್ರೋಲ್ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಿಂದಾಗಿ ಸಜೀವವಾಗಿ ದಹನವಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

Basavaraj Bommai: ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದಾರೆ: ಬಸವರಾಜ ಬೊಮ್ಮಾಯಿ

ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ಗ್ಯಾರಂಟಿ ಯೋಜನೆ ಜಾರಿ: ಬೊಮ್ಮಾಯಿ

congress guarantees: ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರಾಮಾಣಿಕವಾಗಿ ಜನರಿಗೆ ಅನುಕೂಲ ಮಾಡಲು ಅಲ್ಲ. ಆಡಳಿತ ಪಕ್ಷದ ಶಾಸಕರೇ ಯಾವುದೇ ರೀತಿಯ ಅಭಿವೃದ್ಧಿ ಆಗಿಲ್ಲ ಅಂತ ಹೇಳುತ್ತಿದ್ದಾರೆ. ಇವರು ಬಂದ ಮೇಲೆ ಸುಮಾರು ಮೂರುವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅವರ ಅವಧಿ ಮುಗಿಯುವಷ್ಟರಲ್ಲಿ ಆರು ಲಕ್ಷ ಕೋಟಿ ಸಾಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Karnataka Weather: ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ ಸಾಧ್ಯತೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 19 ರಿಂದ 23 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಬೀಸುವುದರಿಂದ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ‌ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

B Sriramulu: ಸಿದ್ದರಾಮಯ್ಯ ಸಿಎಂ ಕುರ್ಚಿ ಖಾಲಿಯಾಗುತ್ತೆ-ಇದು 6ನೇ ಗ್ಯಾರಂಟಿ; ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯ

ಸಿದ್ದರಾಮಯ್ಯಕುರ್ಚಿ ಖಾಲಿಯಾಗುತ್ತೆ-ಇದು 6ನೇ ಗ್ಯಾರಂಟಿ: ಶ್ರೀರಾಮುಲು

ʼʼಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆಯೋ ಅಥವಾ ಜನವರಿಯಲ್ಲಿ ಸಂಕ್ರಾಂತಿ ಬರುತ್ತದೆಯೋ ಗೊತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಖಾಲಿಯಾಗುತ್ತದೆ. ಅದು ಗ್ಯಾರಂಟಿ'ʼ-ಇದು ಶ್ರೀರಾಮುಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪರಿ.

CM Siddaramaiah: ಸಮೀಕ್ಷೆಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ, ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಸಮೀಕ್ಷೆಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ

CM Siddaramaiah: ಕುರುಬ ಸಮಾಜವನ್ನು ಎಸ್‌ಟಿ ಗೆ ಸೇರಿಸುವ ಶಿಫಾರಸ್ಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸ್ಸು ಕಳಿಸಿದ್ದು, ಅದಕ್ಕೆ ವಿವರಣೆಯನ್ನು ಸರ್ಕಾರ ನೀಡಲಿದೆ. ಯಾವುದೇ ಸಮುದಾಯವನ್ನು ಎಸ್‌ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Gadag News: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್‌ಐಆರ್‌ ದಾಖಲು

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್‌ಐಆರ್‌ ದಾಖಲು

Pakistan flag on the car: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಗದಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ.

ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರ ಕಾಮಗಾರಿ ಆರಂಭಿಸಿ: ಸಚಿವ ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

ಕಾರವಾರ-ಇಳಕಲ್ ರಾ.ಹೆ. ಶೀಘ್ರ ಕಾಮಗಾರಿ ಆರಂಭಿಸಿ: ಗಡ್ಕರಿಗೆ ಮನವಿ

Basavaraj Bommai: ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ - ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದ್ದಾರೆ.

Love Jihad: ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ, ಲವ್‌ ಜಿಹಾದ್‌ ನಡೆಸಿದ ವಿಚಿತ್ರ ಆರೋಪ

ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ, ಲವ್‌ ಜಿಹಾದ್‌ನ ವಿಚಿತ್ರ ಆರೋಪ

Love Jihad: ಮದುವೆ ವೇಳೆ ತನ್ನ ಹೆಸರು ಬದಲಾವಣೆ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಆರೋಪಿಸಿದ್ದಾನೆ. ಮುಸ್ಲಿಂ ಸಂಪ್ರದಾಯದಂತೆ ಮದುವೆ ಆದ ವಿಡಿಯೋ ಕೂಡ ವೈರಲ್ ಆಗಿದೆ. ಈ ವೇಳೆ ಜಮಾತ್‌ಗೆ ಹೋಗುವಂತೆ ತಹಸಿನ್ ಬಾನು ಮತ್ತು ಆಕೆಯ ತಾಯಿ ಬೇಗಂ ಈತನಿಗೆ ಒತ್ತಾಯ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಗಂಭೀರವಾದ ಆರೋಪ ಮಾಡಿದ್ದಾನೆ.

Basavaraj Bommai: 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ: ಬಸವರಾಜ ಬೊಮ್ಮಾಯಿ ಭವಿಷ್ಯ

2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ: ಬೊಮ್ಮಾಯಿ ಭವಿಷ್ಯ

Basavaraj Bommai: ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕಪ್ಪತ್ತಗುಡ್ಡಕ್ಕೆ ಕೊನೆಗೂ ಕಾನೂನಿನ ರಕ್ಷಣೆ

ಕಪ್ಪತ್ತಗುಡ್ಡಕ್ಕೆ ಕೊನೆಗೂ ಕಾನೂನಿನ ರಕ್ಷಣೆ

ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ಗಾಳಿ ಬೀಸುವ ಪರ್ವತಗಳಿರುವ ಈ ಕಪ್ಪತ್ತಗುಡ್ಡ ದೇಶದ ಲ್ಲಿಯೇ ಶುದ್ಧ ಗಾಳಿಗೆ ಹೆಸರುವಾಸಿ. ಈ ವನ್ಯಧಾಮದಲ್ಲಿ ಅಪರೂಪದ ವನ್ಯಜೀವಿಗಳು ಹಾಗೂ ಔಷಧಿಯ ಸಸ್ಯಗಳ ನೂರಾರು ಹೆಕ್ಟೇರ್ ಪ್ರದೇಶವಿದೆ. ಇಲ್ಲಿ 500ಕ್ಕೂ ಹೆಚ್ಚು ವಿವಿಧ ಅಪರೂಪದ ಔಷಧಿ ಸಸ್ಯಗಳ ಸಂಗ್ರಹಣೆಗೆ ಮೀಸಲಿಡಲಾಗಿದೆ.

ಕೈಕೊಟ್ಟ ರೋಹಣಿ ಮಳೆ, ರೈತರಲ್ಲಿ ಮೂಡಿದ ಆತಂಕ

ಕೈಕೊಟ್ಟ ರೋಹಣಿ ಮಳೆ, ರೈತರಲ್ಲಿ ಮೂಡಿದ ಆತಂಕ

ಒಂದು ಕಾಲದಲ್ಲಿ ಬಿಳಿ ಬಂಗಾರಕ್ಕೆ ಹೆಸರಾಗಿದ್ದ ತಾಲೂಕಿನಲ್ಲಿ ಖರ್ಚು ವೆಚ್ಚ, ನಿರ್ವಹಣೆ ಮಾಡಲಾ ಗದೆ ಹತ್ತಿ ಬೆಳೆಯನ್ನು ಬಿಟ್ಟು ಗೋವಿನಜೋಳ, ಹೆಸರು, ಸೂರ್ಯಪಾನ, ಶೆಂಗಾ, ಗೋದಿ ಬೆಳೆಯು ತ್ತಿದ್ದಾರೆ. ಗೋವಿನ ಜೋಳ ಬಿತ್ತನೆಗೆ ಕಾದು ಕುಳಿತಿದ್ದಾರೆ. ನೀರಿನ ಸೌಲಭ್ಯ ಇರುವ ರೈತರು ಹತ್ತಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಹೆಸರು ಜತೆಗೆ ಬಿಟಿ ಹತ್ತಿ ಬೆಳೆದಿರುವುದು ಕಂಡು ಬಂದಿತು.

Crime News: ಬಾಲಕಿಗೆ ಅಶ್ಲೀಲ ಸಂದೇಶ, ಮೂವರು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿತ

ಬಾಲಕಿಗೆ ಅಶ್ಲೀಲ ಸಂದೇಶ, ಮೂವರು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿತ

Crime News: ಬಾಲಕರ ಪೋಷಕರು ಮತ್ತು ಸಂಬಂಧಿಕರು 55 ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೆ, ಗ್ರಾಮಸ್ಥರು ಮೂವರು ಬಾಲಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಾಲಕರು ದಲಿತ ಸಮುದಾಯಕ್ಕೆ ಸೇರಿದವರು. ಜಾತಿ ಸಂಘರ್ಷ ಬೆದರಿಕೆ ಇರುವುದರಿಂದ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Laxmi Hebbalkar: ಭಾರತದ ಸಂಸ್ಕೃತಿ ಇಡೀ‌ ವಿಶ್ವಕ್ಕೆ ಮಾದರಿ- ಲಕ್ಷ್ಮೀ ಹೆಬ್ಬಾಳ್ಕರ್

ಭಾರತದ ಸಂಸ್ಕೃತಿ ಇಡೀ‌ ವಿಶ್ವಕ್ಕೆ ಮಾದರಿ: ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ಸರ್ಕಾರ ಅಂಬೇಡ್ಕರ್, ಬುದ್ದ, ಬಸವಣ್ಣನವರ ತತ್ವಗಳನ್ನು ಆದರ್ಶವಾಗಿಟ್ಟುಕೊಂಡು, ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಆಡಳಿತ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

CM Siddaramaiah: ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಸಿದ್ದರಾಮಯ್ಯ

ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಸಿಎಂ

CM Siddaramaiah: ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ. ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Pralhad Joshi: ಪರಮೇಶ್ವರ್‌ ಮೇಲೆ ಇಡಿ ದಾಳಿಗೆ ಮಾಹಿತಿ ನೀಡಿದ್ದೇ ಕಾಂಗ್ರೆಸ್‌: ಪ್ರಲ್ಹಾದ್‌ ಜೋಶಿ

ಪರಮೇಶ್ವರ್‌ ಮೇಲೆ ಇಡಿ ದಾಳಿಗೆ ಮಾಹಿತಿ ನೀಡಿದ್ದೇ ಕಾಂಗ್ರೆಸ್‌: ಜೋಶಿ

ಗೃಹ ಸಚಿವ ಪರಮೇಶ್ವರ್‌ ಮೇಲೆ ಕ್ರಮಕ್ಕಾಗಿ ಇಡಿಗೆ ಕಾಂಗ್ರೆಸ್‌ನ ಒಂದು ಗುಂಪೇ ಮಾಹಿತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ. ಗೃಹ ಸಚಿವರ ಮೇಲೆ ಕ್ರಮವಾಗಬೇಕೆಂದು ಇಡಿಗೆ ಮಾಹಿತಿ ನೀಡಿದ ಕಾಂಗ್ರೆಸಿಗರು ಯಾರೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಎಲ್ಲ ಗೊತ್ತಿದ್ದರೂ ಈಗ ಡ್ರಾಮ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

Loading...